ಪಶ್ಚಿಮ ಬಂಗಾಳ: ರಾಷ್ಟ್ರೀಯ ಜನಸಂಖ್ಯಾ ನೋಂದಣಿಯನ್ನು ವಿರೋಧಿಸುತ್ತಾ ಬಂದಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ನಾನೇ ನೇರವಾಗಿ ಹೇಳುವವರೆಗೂ ಯಾರೂ ಕೂಡ ನಿಮ್ಮ ಕುಟುಂಬಕ್ಕೆ ಸಂಬಂಧಿಸಿದ ಯಾವುದೇ ಮಾಹಿತಿಗಳನ್ನು ನೀಡಬೇಡಿ ಎಂದು ರಾಜ್ಯದ ಜನತೆಗೆ ಸೂಚಿಸಿದ್ದಾರೆ.
ನಾನೇ ನೇರವಾಗಿ ಹೇಳುವವರೆಗೂ ಯಾವುದೇ ಮಾಹಿತಿ ನೀಡಬೇಡಿ: NPR ವಿರೋಧಿಸಿ ದೀದಿ ಸೂಚನೆ
ಪೌರತ್ವ (ತಿದ್ದುಪಡಿ) ಕಾಯ್ದೆ, ರಾಷ್ಟ್ರೀಯ ಜನಸಂಖ್ಯಾ ನೋಂದಣಿ ಹಾಗು ರಾಷ್ಟ್ರೀಯ ಪೌರತ್ವ ನೋಂದಣಿ ವಿರೋಧಿಸಿ ಪಶ್ಚಿಮ ಬಂಗಾಳದ ನಾಡಿಯಾ ಜಿಲ್ಲೆಯಲ್ಲಿ ಸಿಎಂ ಮಮತಾ ಬ್ಯಾನರ್ಜಿ ರ್ಯಾಲಿ ನಡೆಸುತ್ತಿದ್ದಾರೆ.
ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ), ರಾಷ್ಟ್ರೀಯ ಜನಸಂಖ್ಯಾ ನೋಂದಣಿ (ಎನ್ಪಿಆರ್) ಹಾಗೂ ರಾಷ್ಟ್ರೀಯ ಪೌರತ್ವ ನೋಂದಣಿ (ಎನ್ಆರ್ಸಿ) ವಿರೋಧಿಸಿ ಪಶ್ಚಿಮ ಬಂಗಾಳದ ನಾಡಿಯಾ ಜಿಲ್ಲೆಯಲ್ಲಿ ಸಿಎಂ ಮಮತಾ ಬ್ಯಾನರ್ಜಿ ರ್ಯಾಲಿ ನಡೆಸುತ್ತಿದ್ದಾರೆ.
ಈ ವೇಳೆ ಮಾತನಾಡಿದ ಅವರು, ಎನ್ಆರ್ಸಿಯಿಂದಾಗಿ ಅಸ್ಸೋಂನಲ್ಲಿ 100 ಜನರು ಸಾವನ್ನಪ್ಪಿದ್ದಾರೆ, ಎನ್ಆರ್ಸಿ ಭೀತಿಯಿಂದಾಗಿ ಪಶ್ಚಿಮ ಬಂಗಾಳದಲ್ಲಿ 31-32 ಜನರು ಮೃತಪಟ್ಟಿದ್ದಾರೆ. ಯಾರೇ ಬಂದು ನಿಮ್ಮ ದಾಖಲೆಗಳನ್ನು ತೋರಿಸಿ ಎಂದರೆ ತೋರಿಸಬೇಡಿ. ಆಧಾರ್ ಕಾರ್ಡ್ ಸೇರಿದಂತೆ ನಿಮ್ಮ ಕುಟುಂಬಕ್ಕೆ ಸಂಬಂಧಿಸಿದ ಯಾವುದೇ ಮಾಹಿತಿಗಳನ್ನು ಕೇಳಿದರೆ ನಾನು ಹೇಳುವವರೆಗೂ ನೀಡಬೇಡಿ ಎಂದು ಜನರಿಗೆ ಸೂಚಿಸಿದ್ದಾರೆ.