ಮಹಾರಾಷ್ಟ್ರ: ಕ್ಷಿಪ್ರ ರಾಜಕೀಯ ಬೆಳವಣಿಗೆಯಲ್ಲಿ ಮಹಾರಾಷ್ಟ್ರದಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಮರಳಿದ ಕೆಲವೇ ಗಂಟೆಗಳ ನಂತರ, ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ (ಎನ್ಸಿಪಿ) ಶಾಸಕರೊಬ್ಬರು ಕಾಣೆಯಾಗಿದ್ದಾರೆಂದು ಥಾಣೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಶನಿವಾರದಂದು ದೇವೇಂದ್ರ ಫಡ್ನವಿಸ್ ಮತ್ತು ಅಜಿತ್ ಪವಾರ್, ಕ್ರಮವಾಗಿ ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದು, ಅತ್ತ ಶಹಾಪುರ ಕ್ಷೇತ್ರದ ಎನ್ಸಿಪಿ ಶಾಸಕ ದೌಲತ್ ದರೋಡಾ ನಿನ್ನೆ ಬೆಳಗ್ಗೆ ರಾಜಭವನಕ್ಕೆ ಭೇಟಿ ನೀಡಿದ ಬಳಿಕ ನಾಪತ್ತೆಯಾಗಿದ್ದಾರೆ. ಮಾಜಿ ಶಾಸಕ ಪಾಂಡುರಂಗ್ ಬರೋರಾ, ಶನಿವಾರ ಸಂಜೆ ಥಾಣೆಯ ಶಹಾಪುರ ಪೊಲೀಸ್ ಠಾಣೆಯಲ್ಲಿ ಕಾಣೆಯಾಗಿರುವ ಕುರಿತು ದೂರು ದಾಖಲಿಸಿದ್ದಾರೆ.