ಕರ್ನಾಟಕ

karnataka

ETV Bharat / bharat

ಪ್ರತಿಬಾರಿ ಮೋದಿ ದೂರುವುದು ಉತ್ತಮ ನಡೆಯಲ್ಲ: ಪ್ರಧಾನಿ ಪರ 'ಕೈ' ನಾಯಕನ ಬ್ಯಾಟ್..! - ಮೋದಿ ಸರ್ಕಾರದ ಉಜ್ವಲ ಯೋಜನೆ

ವ್ಯಕ್ತಿಗತವಾಗಿ ಹೇಳಿಕೆ ನೀಡುವುದು ಸರಿಯಲ್ಲ, ಮೋದಿ ಸರ್ಕಾರದ ’ಉಜ್ವಲ’ ಕಾರ್ಯಕ್ರಮ ಒಂದು ಅತ್ಯುತ್ತಮ ಯೋಜನೆ ಎಂದು ಇದೇ ವೇಳೆ ಅಭಿಷೇಕ್​ ಮನು ಸಿಂಘ್ವಿ ಟ್ವೀಟ್​ನಲ್ಲಿ ಉಲ್ಲೇಖಿಸಿದ್ದಾರೆ.

ಅಭಿಷೇಕ್ ಮನು ಸಿಂಘ್ವಿ

By

Published : Aug 23, 2019, 2:29 PM IST

ನವದೆಹಲಿ:ಕೆಲ ದಿನಗಳ ಹಿಂದೆ ಮೋದಿ ಸರ್ಕಾರ ಒಂದಷ್ಟು ನಿರ್ಧಾರಗಳನ್ನು ಬೆಂಬಲಿಸಿ ಮಾತನಾಡಿದ್ದ ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್ ಮಾತಿಗೆ ಇದೀಗ ಮತ್ತೋರ್ವ 'ಕೈ' ನಾಯಕ ಸಹಮತ ಸೂಚಿಸಿದ್ದಾರೆ.

ಪ್ರತಿಯೊಂದು ಸಂದರ್ಭದಲ್ಲೂ ಪ್ರಧಾನಿ ಮೋದಿ ಅವರನ್ನು ರಾಕ್ಷಸೀಕರಣಗೊಳಿಸುವುದು ತಪ್ಪು ಎಂದಿರುವ ಕಾಂಗ್ರೆಸ್ ನಾಯಕ ಅಭಿಷೇಕ್ ಮನು ಸಿಂಘ್ವಿ, ಪ್ರಧಾನಿ ಹುದ್ದೆಯಲ್ಲಿರುವವರು ದೇಶವನ್ನು ಪ್ರತಿನಿಧಿಸುತ್ತಾರೆ. ಆ ಸ್ಥಾನದಲ್ಲಿರುವ ವ್ಯಕ್ತಿಯ ನಿರ್ಧಾರಗಳು ಉತ್ತಮವಾಗಿರಬಹುದು ಅಥವಾ ಕೆಟ್ಟದಾಗಿರಬಹುದು. ಆದರೆ, ಅದನ್ನು ಖಂಡಿಸುವ ಮೊದಲು ಯೋಚನೆ ಮಾಡಬೇಕು ಎಂದು ಟ್ವೀಟ್ ಮಾಡಿದ್ದಾರೆ.

ವ್ಯಕ್ತಿಗತವಾಗಿ ಹೇಳಿಕೆ ನೀಡುವುದು ಸರಿಯಲ್ಲ, ಮೋದಿ ಸರ್ಕಾರದ ಉಜ್ವಲ ಒಂದು ಅತ್ಯುತ್ತಮ ಯೋಜನೆ ಎಂದು ಇದೇ ವೇಳೆ ಅಭಿಷೇಕ್​ ಮನು ಸಿಂಘ್ವಿ ಟ್ವೀಟ್​ನಲ್ಲಿ ಉಲ್ಲೇಖಿಸಿದ್ದಾರೆ.

ಜೈರಾಮ್ ರಮೇಶ್ ಹೇಳಿಕೆಯಲ್ಲೇನಿತ್ತು..?

ಬುಧವಾರದಂದು ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಮಾತನಾಡಿದ್ದ ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್, ಮೋದಿ ಸರ್ಕಾರದ ಪ್ರತಿಯೊಂದು ನಿರ್ಧಾರವನ್ನು ಟೀಕಿಸುತ್ತಾ, ಋಣಾತ್ಮಕ ಕಥೆಗಳನ್ನು ಹೇಳುತ್ತಿದ್ದರೆ ದೇಶದ ಉದ್ಧಾರ ಸಾಧ್ಯವಿಲ್ಲ ಎಂದಿದ್ದರು.

ABOUT THE AUTHOR

...view details