ತೆಲಂಗಾಣ: ಕೊರೊನಾ ವೈರಸ್ ಹರಡುವಿಕೆ ತಡೆಗಟ್ಟಲು ತೆಲಂಗಾಣ ಸರ್ಕಾರ ನಿರ್ಧರಿಸಿದ್ದು, ಈ ಹಿನ್ನೆಲೆ ಸಾರ್ವಜನಿಕ ಸಾರಿಗೆ ವ್ಯವಸ್ಥೆಯಲ್ಲಿ ಸ್ವಚ್ಛತೆ ಕಾಪಾಡುವ ಸಲುವಾಗಿ ಅಭಿಯಾನ ಸೇರಿ ವಿವಿಧ ಕಾರ್ಯಕ್ರಮಗಳನ್ನು ಕೈಗೊಂಡಿದೆ.
ತೆಲಂಗಾಣ ಮೂಲದ ಟೆಕ್ಕಿಯೋರ್ವನಲ್ಲಿ ಕೊರೊನಾ ವೈರಸ್ ಕಾಣಿಸಿಕೊಂಡ ಹಿನ್ನೆಲೆ ಈ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ತೆಲಂಗಾಣ ಪುರಸಭೆ ಆಡಳಿತ ಸಚಿವ ಕೆ. ಟಿ. ರಾಮರಾವ್ ಅವರು ಹೈದರಾಬಾದ್ ಮೆಟ್ರೋ ರೈಲು ಮತ್ತು ರಾಜ್ಯ ಸಾರಿಗೆ ಸಚಿವ ಪುವವಾಡ ಅಜಯ್ ಕುಮಾರ್ ಅವರಿಗೆ ರಾಜ್ಯದಲ್ಲಿ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳುವಂತೆ ಮನವಿ ಮಾಡಿದ್ದಾರೆ.