ಕರ್ನಾಟಕ

karnataka

By

Published : Nov 23, 2020, 5:17 PM IST

ETV Bharat / bharat

ಈಶಾನ್ಯ ಗಡಿಯಿಂದ ದೇಶದೊಳಗೆ ಚಿನ್ನ ಕಳ್ಳ ಸಾಗಣೆ : ಇಬ್ಬರ ಬಂಧನ

ರೈಲಿನಲ್ಲಿ ಅಕ್ರಮವಾಗಿ ಚಿನ್ನ ಸಾಗಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಬಂಧಿಸಲಾಗಿದೆ ಎಂದು ಕಸ್ಟಮ್ಸ್​​​​ ವಿಭಾಗದ ಉಪ ಆಯುಕ್ತರು ಮಾಹಿತಿ ನೀಡಿದ್ದಾರೆ..

Customs recovers gold
ದೆಹಲಿಯಲ್ಲಿ ಚಿನ್ನ ಜಪ್ತಿ

ನವದೆಹಲಿ:ರೈಲ್ವೆ ನಿಲ್ದಾಣದಲ್ಲಿ 3.26 ಕೋಟಿ ರೂ.ಗಳ ಚಿನ್ನ ವಶಕ್ಕೆ ಪಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದ್ದು, 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ ಎಂದು ಕಸ್ಟಮ್ಸ್​​​​ ವಿಭಾಗದ ಉಪ ಆಯುಕ್ತರು ಮಾಹಿತಿ ನೀಡಿದ್ದಾರೆ.

ನವೆಂಬರ್ 19ರಂದು ನವದೆಹಲಿಯ ರೈಲ್ವೆ ನಿಲ್ದಾಣದಲ್ಲಿ ನಿಖರ ಮಾಹಿತಿ ಮೇರೆಗೆ ದಾಳಿ ನಡೆಸಿದ ಕಸ್ಟಮ್ಸ್​​ ಅಧಿಕಾರಿಗಳು ಹೌರಾದಿಂದ ಬಂದಿದ್ದ ರಾಜಧಾನಿ ಎಕ್ಸ್​ಪ್ರೆಸ್​​ನಲ್ಲಿ ಓರ್ವ ವ್ಯಕ್ತಿಯನ್ನು ತಡೆದು 3.26 ಕೋಟಿ ರೂಪಾಯಿ ಮೌಲ್ಯದ 6.3 ಕೆ.ಜಿ ಚಿನ್ನವನ್ನ ಜಪ್ತಿ ಮಾಡಿದ್ದರು.

ಜಪ್ತಿ ಮಾಡಿದ ಚಿನ್ನವು ಬಿಸ್ಕೆಟ್ ರೂಪದಲ್ಲಿದ್ದು, ಈ ಬಗ್ಗೆ ತನಿಖೆ ನಡೆಸಿದ ಕಸ್ಟಮ್ಸ್ ಅಧಿಕಾರಿಗಳು ದೇಶದ ಈಶಾನ್ಯ ಗಡಿಯ ಮೂಲಕ ದೇಶದ ಒಳಗೆ ಚಿನ್ನವನ್ನು ಕಳ್ಳಸಾಗಣೆ ಮಾಡಲಾಗುತ್ತಿತ್ತು ಎಂಬ ಮಾಹಿತಿಯನ್ನು ಬಹಿರಂಗಪಡಿಸಿದ್ದಾರೆ.

ಕಸ್ಟಮ್ಸ್ ಕಾಯ್ದೆ-1962ರ ಅಡಿಯ ಅನ್ವಯ ದೂರು ದಾಖಲು ಮಾಡಿಕೊಳ್ಳಲಾಗಿದ್ದು, ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ.

ABOUT THE AUTHOR

...view details