ನವದೆಹಲಿ:ಸುಮಾರು 20,400ಕ್ಕೂ ಹೆಚ್ಚು ವಿದೇಶಿ ಪ್ರಜೆಗಳನ್ನು ಭಾರತದಿಂದ ಸ್ಥಳಾಂತರ ಮಾಡಲಾಗಿದೆ. ಈಗ ಹೊರದೇಶಗಳಲ್ಲಿರುವ ಭಾರತೀಯರನ್ನು ಕರೆಸಿಕೊಳ್ಳುವ ಸಲುವಾಗಿ ಚಿಂತನೆ ನಡೆಸಲಾಗಿದೆ. ಭಾರತದಲ್ಲಿ ಕೊರೊನಾ ಪರಿಸ್ಥಿತಿಯನ್ನು ಆಧರಿಸಿ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಸರ್ಕಾರ ತಿಳಿಸಿದೆ.
ಈ ಕುರಿತು ಮಾತನಾಡಿರುವ ವಿದೇಶಾಂಗ ಇಲಾಖೆ ಹೆಚ್ಚುವರಿ ಕಾರ್ಯದರ್ಶಿ ಡಿ.ರವಿ ''ವಿವಿಧ ರಾಷ್ಟ್ರಗಳ ಸರ್ಕಾರಗಳಿಂದ ಈಗಾಗಲೇ ಕೋರಿಕೆಯಿದೆ. ನಾವು 20,473 ಮಂದಿಯನ್ನು ಈಗಾಗಲೇ ಅವರವರ ದೇಶಗಳಿಗೆ ಕಳಿಸಿದ್ದೇವೆ. ಇದೇ ಪ್ರಕ್ರಿಯೆಯ ಭಾಗವಾಗಿ ಬೇರೆ ರಾಷ್ಟ್ರಗಳಲ್ಲಿರುವ ಭಾರತೀಯರನ್ನೂ ಕರೆತರಬೇಕಾಗಿದೆ. ಭಾರತದಲ್ಲಿ ಕೊರೊನಾ ಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಸ್ಪಷ್ಟನೆ ನೀಡಿದರು. ಸದ್ಯಕ್ಕೆ ಲಾಕ್ಡೌನ್ ಇರುವ ಕಾರಣದಿಂದ ಈ ಚರ್ಚೆ ಸರಿಯಾಗ ಉತ್ತರ ನೀಡಲು ಸಾಧ್ಯವಾಗುವುದಿಲ್ಲ ಎಂದರು