ಕರ್ನಾಟಕ

karnataka

ETV Bharat / bharat

ಕಠಿಣ ಹವಾಮಾನ ಪರಿಸ್ಥಿತಿಯಲ್ಲೂ ಮುಂದುವರೆದ ರೈತರ ಪ್ರತಿಭಟನೆ

ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಕೃಷಿ ಕಾಯ್ದೆಗಳನ್ನು ವಿರೋಧಿಸಿ ದೆಹಲಿ ಗಡಿಯಲ್ಲಿ ರೈತರು ನಡೆಸುತ್ತಿರುವ ಪ್ರತಿಭಟನೆ 39ನೇ ದಿನಕ್ಕೆ ಕಾಲಿಟ್ಟಿದೆ. ಮಳೆ ಮತ್ತು ಶೀತ ವಾತಾವರಣವನ್ನೂ ಲೆಕ್ಕಿಸದೇ ಅನ್ನದಾತರು ಪ್ರತಿಭಟಿಸುತ್ತಿದ್ದಾರೆ..

By

Published : Jan 3, 2021, 10:46 AM IST

Delhi: Farmers continue to hold sit-in protest at Ghazipur
ಕಠಿಣ ಹವಾಮಾನ ಪರಿಸ್ಥಿತಿಯಲ್ಲೂ ಮುಂದುವರೆದ ರೈತರ ಪ್ರತಿಭಟನೆ

ದೆಹಲಿ: ಮಳೆ ಮತ್ತು ಶೀತ ವಾತಾವರಣದ ನಡುವೆಯೂ ಘಾಝಿಪುರ (ದೆಹಲಿ-ಯುಪಿ ಗಡಿ) ದಲ್ಲಿ ರೈತರು ತಮ್ಮ ಪ್ರತಿಭಟನೆ ಮುಂದುವರಿಸಿದ್ದಾರೆ.

ಈ ಸುದ್ದಿಯನ್ನೂ ಓದಿ:ಮಾತುಕತೆ ವಿಫಲವಾದರೆ ಮಾಲ್​, ಪೆಟ್ರೋಲ್​ ಪಂಪ್​ ಬಂದ್ ಎಚ್ಚರಿಕೆ!

ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಕೃಷಿ ಕಾಯ್ದೆಗಳನ್ನು ವಿರೋಧಿಸಿ ದೆಹಲಿ ಗಡಿಯಲ್ಲಿ ರೈತರು ನಡೆಸುತ್ತಿರುವ ಪ್ರತಿಭಟನೆ 39ನೇ ದಿನಕ್ಕೆ ಕಾಲಿಟ್ಟಿದೆ. ಈಗಾಗಲೇ 6 ಸುತ್ತಿನ ಮಾತುಕತೆ ನಡೆಸಿದ್ರೂ ಕೇಂದ್ರದಿಂದ ನಿರೀಕ್ಷಿತ ಫಲ ಸಿಕ್ಕಿಲ್ಲ. ಪರಿಣಾಮ ಇಂದು ಮಳೆ ಮತ್ತು ಶೀತ ವಾತಾವರಣವನ್ನೂ ಲೆಕ್ಕಿಸದೇ ಪ್ರತಿಭಟನೆ ನಡೆಸುತ್ತಿದ್ದಾರೆ ರೈತರು.

ಈ ಸುದ್ದಿಯನ್ನೂ ಓದಿ:ರೈತರ ಬೇಡಿಕೆ ಈಡೇರಿಸದಿದ್ರೆ ಜ.26ಕ್ಕೆ 'ಕಿಸಾನ್‌ ಗಂಟಾಂತರ ಪರೇಡ್'- ಯೋಗೇಂದ್ರ ಯಾದವ್‌

ಪ್ರತಿಭಟನಾಕಾರರೊಬ್ಬರು ಮಾತನಾಡಿ, ನಾವು ನಮ್ಮ ಕುಟುಂಬಸ್ಥರಿಂದ ದೂರವಿದ್ದು, ಸದ್ಯ ಇಂತಹ ಕಠಿಣ ಹವಾಮಾನ ಪರಿಸ್ಥಿತಿಯಲ್ಲೂ ಪ್ರತಿಭಟನೆ ನಡೆಸುತ್ತಿದ್ದೇವೆ. ನಾಳೆ ಸರ್ಕಾರ ನಮ್ಮ ಬೇಡಿಕೆಗಳನ್ನು ಈಡೇರಿಸುತ್ತದೆಯೆಂದು ಭಾವಿಸಿದ್ದೇನೆ ಎಂದು ತಿಳಿಸಿದರು.

ABOUT THE AUTHOR

...view details