ನವದೆಹಲಿ: ಕಳೆದ ವರ್ಷದ ಡಿಸೆಂಬರ್ 15 ರಂದು ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿಶ್ವವಿದ್ಯಾಲಯದಲ್ಲಿ ನಡೆದಿರುವ ಪೊಲೀಸ್ ದೌರ್ಜನ್ಯದ ಬಗ್ಗೆ ಸಮಿತಿ ಅಥವಾ ಎಸ್ಐಟಿ ನಡೆಸಿದ ತನಿಖೆಯ ಬಗ್ಗೆ ನ್ಯಾಯಾಲಯದ ಮೇಲ್ವಿಚಾರಣೆ ಕೋರಿ ಸಲ್ಲಿಸಿದ್ದ ಮನವಿಗೆ ದೆಹಲಿ ಹೈಕೋರ್ಟ್ ಕೇಂದ್ರದ ಪ್ರತಿಕ್ರಿಯೆ ಕೋರಿದೆ.
ಡಿಸೆಂಬರ್ 15ರಂದು ಜಾಮಿಯಾ ಬಳಿ ಪೌರತ್ವ ತಿದ್ದುಪಡಿ ಕಾಯ್ದೆಯ ವಿರುದ್ಧ ನಡೆಯುತ್ತಿದ್ದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿತ್ತು, ಪ್ರತಿಭಟನಾಕಾರರು ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿ ಬಸ್ ಮತ್ತು ಖಾಸಗಿ ವಾಹನಗಳಿಗೆ ಬೆಂಕಿ ಹಚ್ಚಿದ್ದರು. ನಂತರ ಪೊಲೀಸರು ಜಾಮಿಯ ಒಳಗೆ ಪ್ರವೇಶಿಸಿದ್ದು, ಗಲಭೆ ನಿಯಂತ್ರಿಸಲು ಲಘು ಲಾಠಿ ಪ್ರಹಾರ ಹಾಗೂ ಅಶ್ರುವಾಯು ಸಿಡಿಸಿದ್ದರು.