ನವದೆಹಲಿ: ಕೃಷಿ ಕಾನೂನುಗಳ ವಿರೋಧಿಸಿ ರೈತ ಹೋರಾಟ ಮುಂದುವರೆದಿದ್ದು, ದೆಹಲಿ ಗಡಿಯಲ್ಲಿ ಪೊಲೀಸರು ಭಾರಿ ಬಂದೋಬಸ್ತ್ ಕೈಗೊಂಡಿದ್ದಾರೆ.
ಮುಂದುವರಿದ ರೈತ ಹೋರಾಟ: ಟಿಕ್ರಿ ಗಡಿಯಲ್ಲಿ ಭಾರಿ ಬಿಗಿ ಭದ್ರತೆ - ಕೃಷಿ ಕಾನೂನುಗಳ ವಿರೋಧಿಸಿ ರೈತ ಹೋರಾಟ
ರಾಷ್ಟ್ರ ರಾಜಧಾನಿಯಲ್ಲಿ ರೈತ ಹೋರಾಟ ಮುಂದುವರೆದಿದೆ. ಈ ಹಿನ್ನೆಲೆಯಲ್ಲಿ ಪೊಲೀಸರು ಭದ್ರತೆ ಕೈಗೊಂಡಿದ್ದಾರೆ.
![ಮುಂದುವರಿದ ರೈತ ಹೋರಾಟ: ಟಿಕ್ರಿ ಗಡಿಯಲ್ಲಿ ಭಾರಿ ಬಿಗಿ ಭದ್ರತೆ Tikri Border](https://etvbharatimages.akamaized.net/etvbharat/prod-images/768-512-10419092-thumbnail-3x2-mng.jpg)
ಟಿಕ್ರಿ ಗಡಿಯಲ್ಲಿ ಪೊಲೀಸರಿಂದ ಬಿಗಿ ಭದ್ರತೆ
ಇನ್ನು ಸಿಂಘು, ಟಿಕ್ರಿ ಗಡಿಯಲ್ಲಿ ಪೊಲೀಸರು ಭದ್ರತೆ ನಿಯೋಜನೆ ಮಾಡಿದ್ದು, ವಾಹನಗಳ ಸಂಚಾರಕ್ಕೆ ಪರ್ಯಾಯ ಮಾರ್ಗ ಕಲ್ಪಿಸಿದ್ದಾರೆ. ಸಿಂಘು, ಮಂಗೇಶ್, ಸಬೋಲಿ, ಪಿಯೌ ಮಣಿಯಾರಿ ಗಡಿಗಳನ್ನು ಮುಚ್ಚಲಾಗಿದ್ದು, ಲ್ಯಾಂಪೂರ್, ಸಫಿಯಾಬಾದ್, ಸಿಂಘು ಶಾಲೆ ಮತ್ತು ಪಲ್ಲಾ ಬಳಿ ಟೋಲ್ಗೇಟ್ಗಳನ್ನು ತೆರೆಯಲಾಗಿದೆ.
ಗಣರಾಜ್ಯೋತ್ಸವದ ದಿನ ನಡೆದ ಹಿಂಸಾಚಾರದಿಂದ ಎಚ್ಚೆತ್ತುಕೊಂಡ ಪೊಲೀಸರು ಬಿಗಿ ಭದ್ರತೆ ಕೈಗೊಂಡಿದ್ದಾರೆ.