ನವದೆಹಲಿ: ದೇಶಾದ್ಯಂತ ಏಕರೂಪದ ನಾಗರಿಕ ಸಂಹಿತೆ ಜಾರಿ ಕುರಿತ ಅರ್ಜಿಯನ್ನು ದೆಹಲಿ ಹೈಕೋರ್ಟ್ ವಿಚಾರಣೆ ನಡೆಸಲಿದ್ದು, ಈ ಬಗ್ಗೆ ಕೇಂದ್ರದ ಉತ್ತರವನ್ನು ಕೋರಿದೆ.
ಎಲ್ಲಾ ನಾಗರಿಕರಿಗೆ ಸಾಮಾನ್ಯ ನಾಗರಿಕ ಸಂಹಿತೆ ಪರಿಚಯಿಸುವುದು 44ನೇ ವಿಧಿಯ ಹಿಂದಿನ ಆಲೋಚನೆಯಾಗಿದೆ ಎಂದು ಅರ್ಜಿಯಲ್ಲಿ ಹೇಳಲಾಗಿದೆ. ಸಂವಿಧಾನವು ಆತ್ಮಸಾಕ್ಷಿಯ ಮತ್ತು ಧರ್ಮದ ಸ್ವಾತಂತ್ರ್ಯವನ್ನು ಖಾತ್ರಿಪಡಿಸುತ್ತದೆ. ಆದರೆ, ಅದು ವೈಯಕ್ತಿಕ ಕಾನೂನು ಮತ್ತು ಸಾಮಾಜಿಕ ಸಂಬಂಧಗಳಿಂದ ಮತ್ತು ಆನುವಂಶಿಕತೆಯನ್ನು ನಿಯಂತ್ರಿಸುವ ಕಾನೂನುಗಳಿಂದ ಧರ್ಮವನ್ನು ಬೇರೆಡೆಗೆ ತಿರುಗಿಸಲು ಪ್ರಯತ್ನಿಸುತ್ತದೆ ಎಂದು ಹೇಳಲಾಗಿದೆ.
ಅಲ್ಲದೆ 14ನೇ ವಿಧಿಯಡಿಯಲ್ಲಿ ಖಾತರಿಪಡಿಸುವ ಸಮಾನತೆಯ ಹಕ್ಕು, 15ನೇ ವಿಧಿಯ ಅಡಿಯಲ್ಲಿ ಖಾತರಿಪಡಿಸಿದ ತಾರತಮ್ಯದ ವಿರುದ್ಧದ ಹಕ್ಕು ಮತ್ತು 21ನೇ ವಿಧಿಯ ಅಡಿಯಲ್ಲಿ ಖಾತರಿಪಡಿಸಿದ ಜೀವನ ಮತ್ತು ಸ್ವಾತಂತ್ರ್ಯದ ಹಕ್ಕನ್ನು ಏಕರೂಪದ ನಾಗರಿಕ ಸಂಹಿತೆ ಜಾರಿಗೊಳಿಸದೆ ರಕ್ಷಿಸಲಾಗುವುದಿಲ್ಲ ಎಂದು ಅರ್ಜಿಯಲ್ಲಿ ಹೇಳಿದೆ.