ಕರ್ನಾಟಕ

karnataka

ETV Bharat / bharat

ಐಶ್ವರ್ಯಾಗೆ ಇಡಿ ಫುಲ್‌ ಡ್ರಿಲ್; ಅತಿಸಾರ, ರಕ್ತದೊತ್ತಡ ಕಾರಣ ಆಸ್ಪತ್ರೆ ಸೇರಿದ ಡಿಕೆಶಿ - ಜಾರಿ ನಿರ್ದೇಶನಾಲಯ

ಜಾರಿ ನಿರ್ದೇಶನಾಲಯದಿಂದ ಬಂಧನಕ್ಕೊಳಗಾದ ಮಾಜಿ ಸಚಿವ ಡಿಕೆ ಶಿವಕುಮಾರ್​ ಆರೋಗ್ಯದಲ್ಲಿ ಏರುಪೇರು ಕಂಡು ಬಂದಿದ್ದು, ಅವರನ್ನು ಆರ್​ಎಂಎಲ್​ ಆಸ್ಪತ್ರೆಗೆ ದಾಖಲಿಸಲಾಗಿದೆ.

ಡಿಕೆ ಶಿವಕುಮಾರ್​

By

Published : Sep 12, 2019, 8:37 PM IST

Updated : Sep 12, 2019, 8:43 PM IST

ನವದೆಹಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣ ಸಂಬಂಧ ಬಂಧನದಲ್ಲಿರುವ ಮಾಜಿ ಸಚಿವ ಡಿ.ಕೆ ಶಿವಕುಮಾರ್ ಆರೋಗ್ಯದಲ್ಲಿ ಏರುಪೇರು ಕಂಡು ಬಂದಿದೆ. ಹಾಗಾಗಿ ಅವರನ್ನು ದೆಹಲಿಯ ಆರ್​​ಎಂಎಲ್​ ಆಸ್ಪತ್ರೆಗೆ ದಾಖಲಿಸಲಾಗಿದ್ದು ಚಿಕಿತ್ಸೆ ನೀಡಲಾಗುತ್ತಿದೆ.

ಅತಿಸಾರ ಹಾಗೂ ರಕ್ತದೊತ್ತಡದಿಂದ ಬಳಲುತ್ತಿರುವ ಕಾರಣ ಆರ್​ಎಂಎಲ್​ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದು ಬಂದಿದೆ.

ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಕೆ ಶಿವಕುಮಾರ್​ ಮಗಳು ಐಶ್ವರ್ಯಾ ಇಂದು ಜಾರಿ ನಿರ್ದೇಶನಾಲಯದಿಂದ ವಿಚಾರಣೆಗೊಳಪಟ್ಟಿದ್ದು, ವಿವಿಧ ಕಂಪನಿಗಳಲ್ಲಿ ಅವರ ಹೆಸರಿನಲ್ಲಿ ಹೂಡಿಕೆ ಮಾಡಿರುವ ಕಾರಣ ವಿಚಾರಣೆ ನಡೆಸಲಾಗಿದೆ. ಐಶ್ವರ್ಯಾ ಅವರನ್ನು ಜಾರಿ ನಿರ್ದೇಶನಾಲಯದ ವಿಚಾರಣೆಗೆ ಒಳಪಡಿಸಿರುವ ಸುದ್ದಿ ತಿಳಿದ ಡಿಕೆ ಶಿವಕುಮಾರ್​ ಅವರಿಗೆ ಆರೋಗ್ಯದಲ್ಲಿ ಏರುಪೇರಾಗಿದೆ ಎಂಬ ಮಾಹಿತಿಯೂ ಹೊರಬಿದ್ದಿದೆ.

ಡಿಕೆ ಶಿವಕುಮಾರ್​ ಅವರ ನವದೆಹಲಿ ನಿವಾಸದಲ್ಲಿ 8.59 ಕೋಟಿ ರೂ. ಅಕ್ರಮ ಹಣ ಪತ್ತೆಯಾಗಿತ್ತು. ಈ ಕುರಿತ ವಿಚಾರಣೆಗೆ ಹಾಜರಾಗುವಂತೆ ಇಡಿ ಸಮನ್ಸ್​ ಜಾರಿಗೊಳಿಸಿತ್ತು. ಆ. 30ರಂದು ಡಿಕೆಶಿ ವಿಚಾರಣೆಗೆ ಹಾಜರಾಗಿದ್ದು,ಅವರು ಪ್ರಶ್ನೆಗಳಿಗೆ ಸರಿಯಾಗಿ ಉತ್ತರಿಸುತ್ತಿಲ್ಲ ಎಂದು ಅಧಿಕಾರಿಗಳು ಹೇಳಿದ್ದರು. ಹೀಗಾಗಿ ಹೆಚ್ಚಿನ ವಿಚಾರಣೆಗಾಗಿ ಮಾಜಿ ಸಚಿವರನ್ನು ಬಂಧಿಸಿ ವಿಚಾರಣೆ ನಡೆಸಿದ್ದರು. ತದನಂತರ ಕೋರ್ಟ್​​ನಲ್ಲಿ ವಿಚಾರಣೆ ನಡೆದು,​ 10 ದಿನಗಳ ಕಾಲ ಡಿಕೆಶಿಯನ್ನು ಇಡಿ ವಶಕ್ಕೆ ಒಪ್ಪಿಸಲಾಗಿತ್ತು. ನಾಳೆ ಈ ವಿಚಾರಣಾ ಕಾಲಾವಧಿ ಮುಕ್ತಾಯಗೊಳ್ಳಲಿದೆ.

ಇನ್ನು ಐಶ್ವರ್ಯ ಅವರಿಗೆ ಸಾಕಷ್ಟು ಪ್ರಶ್ನೆಗಳನ್ನು ಕೇಳಿ ತೀವ್ರವಾಗಿ ವಿಚಾರಣೆ ನಡೆಸಿರುವ ಜಾರಿ ಅಧಿಕಾರಿಗಳು ಸಂಜೆ ವೇಳೆ ಅವರನ್ನು ಬಿಡುಗಡೆಗೊಳಿಸಿದ್ದಾರೆ.

Last Updated : Sep 12, 2019, 8:43 PM IST

ABOUT THE AUTHOR

...view details