ನವದೆಹಲಿ: ಐಎನ್ಎಕ್ಸ್ ಮೀಡಿಯಾ ಹಗರಣದಲ್ಲಿ ತಿಹಾರ್ ಜೈಲು ಸೇರಿರುವ ಮಾಜಿ ಕೇಂದ್ರ ಗೃಹ ಸಚಿವ ಪಿ.ಚಿದಂಬರಂ ಮತ್ತು ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಅವರನ್ನ ಒಂದೇ ಸೆಲ್ನಲ್ಲಿ ಇರಿಸಲಾಗಿದೆ ಎಂದು ತಿಳಿದು ಬಂದಿದೆ.
ಐಎನ್ಎಕ್ಸ್ ಮೀಡಿಯಾ ಹಗರಣದಲ್ಲಿ ಸೆ.5 ರಿಂದ ನ್ಯಾಯಾಂಗ ಬಂಧನದಲ್ಲಿರುವ ಪಿ.ಚಿದಂಬರಂ ಅವರನ್ನ ತಿಹಾರ್ ಜೈಲಿನ 7ನೇ ನಂಬರ್ನ ಸೆಲ್ನಲ್ಲಿ ಇರಿಸಲಾಗಿತ್ತು. ಇತ್ತ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ನ್ಯಾಯಾಂಗ ಬಂಧನಕ್ಕೆ ಒಳಗಾಗಿರುವ ಡಿ.ಕೆ.ಶಿವಕುಮಾರ್ ಅನಾರೋಗ್ಯ ಕಾರಣದಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತಿದ್ದರು.ಡಿಕೆಶಿ ಆರೋಗ್ಯದಲ್ಲಿ ಕೊಂಚ ಸುಧಾರಣೆ ಕಂಡು ಬಂದ ಕಾರಣ ಅವರನ್ನೂ ತಿಹಾರ್ ಜೈಲಿಗೆ ಕರೆದೊಯ್ಯಲಾಗಿದ್ದು, ಪಿ.ಚಿದಂಬರಂ ಅವರನ್ನ ಇರಿಸಲಾಗಿದ್ದ 7ನೇ ಸೆಲ್ನಲ್ಲಿ ಇರಿಸಲಾಗಿದೆ ಎಂದು ವರದಿಯಾಗಿದೆ.
ವಿಶೇಷ ಎಂದರೆ