ನವದೆಹಲಿ: ಮಾಜಿ ರಾಷ್ಟ್ರಪತಿ ಡಾ. ಎ.ಪಿ.ಜೆ. ಅಬ್ದುಲ್ ಕಲಾಂ ಅವರ ಪುಣ್ಯತಿಥಿಯಂದು ಗೃಹ ಸಚಿವ ಅಮಿತ್ ಶಾ ಗೌರವ ಸಲ್ಲಿಸಿದರು. ಕಲಾಂ ಅವರು ವಿಜ್ಞಾನದಿಂದ ರಾಜಕೀಯದವರೆಗಿನ ಹಲವಾರು ಕ್ಷೇತ್ರಗಳಲ್ಲಿ ಅಳಿಸಲಾಗದ ಗುರುತುಗಳನ್ನು ಬಿಟ್ಟಿ ಹೋಗಿದ್ದಾರೆ ಎಂದು ಹೇಳಿದರು.
"ಬುದ್ಧಿಶಕ್ತಿ, ಬುದ್ಧಿವಂತಿಕೆ ಮತ್ತು ಸರಳತೆಯ ಸಾರಾಂಶವಾದ ಡಾ. ಎಪಿಜೆ ಅಬ್ದುಲ್ ಕಲಾಂ ಅವರಿಗೆ ನಾನ ಗೌರವ ಸಲ್ಲಿಸುತ್ತೇನೆ. ವಿಜ್ಞಾನದಿಂದ ರಾಜಕೀಯದವರೆಗಿನ ಹಲವಾರು ಕ್ಷೇತ್ರಗಳಲ್ಲಿ ಅಳಿಸಲಾಗದ ಗುರುತುಗಳನ್ನು ಬಿಟ್ಟಿರುವ ಅವರು ಜನರ ನೆಚ್ಚಿನ ರಾಷ್ಟ್ರಪತಿಯಾಗಿದ್ದರು" ಎಂದು ಶಾ ಟ್ವೀಟ್ ಮಾಡಿದ್ದಾರೆ.
ಕಲಾಂ ಅವರ ಜ್ಞಾನದ ಅನ್ವೇಷಣೆಯು ಸ್ವಾವಲಂಬಿ ಭಾರತದ ಕಲ್ಪನೆಯನ್ನು ಪ್ರೇರೇಪಿಸುತ್ತದೆ ಎಂದು ಶಾ ಹೇಳಿದರು.