ಕರ್ನಾಟಕ

karnataka

ETV Bharat / bharat

ಇಬ್ಬರು ಉಗ್ರರನ್ನು ಸೆದೆ ಬಡಿದ ಭಾರತೀಯ ಸೇನೆ - ಮೂವರು ಉಗ್ರರನ್ನು ಎನ್​ಕೌಂಟರ್ ಮಾಡಿದ ಭದ್ರತಾ ಪಡೆಗಳು

ಉತ್ತರ ಕಾಶ್ಮೀರದಲ್ಲಿ ನಡೆದ ಎನ್​ಕೌಂಟರ್​​ನಲ್ಲಿ ಭದ್ರತಾ ಪಡೆಗಳು ಇಬ್ಬರು ಉಗ್ರರನ್ನು ಕೊಂದು ಹಾಕಿವೆ ಎಂದು ಪೊಲೀಸರು ತಿಳಿಸಿದ್ದಾರೆ.

Encounter breaks out in Jammu and Kashmir's Anantnag
ಭದ್ರತಾ ಪಡೆಗಳಿಂದ ಎನ್​ಕೌಂಟರ್ ಕಾರ್ಯಾಚರಣೆ

By

Published : Jul 13, 2020, 9:23 AM IST

Updated : Jul 13, 2020, 12:49 PM IST

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಅನಂತ್​ನಾಗ್​ ಜಿಲ್ಲೆಯಲ್ಲಿ ಭದ್ರತಾ ಪಡೆ ಹಾಗೂ ಉಗ್ರರ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ಉಗ್ರರನ್ನು ಹತ್ಯೆಗೈಯ್ಯಲಾಗಿದೆ.

ಭದ್ರತಾ ಪಡೆಗಳಿಂದ ಎನ್​ಕೌಂಟರ್ ಕಾರ್ಯಾಚರಣೆ

ಇಂದು ಬೆಳಗ್ಗೆ ಅನಂತ್‌ನಾಗ್ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ಎನ್​ಕೌಂಟರ್ ಕಾರ್ಯಾಚರಣೆ ಆರಂಭಿಸಿತ್ತು. ಉಗ್ರರು ಇರುವ ಬಗ್ಗೆ ಮಾಹಿತಿ ದೊರೆತ ಹಿನ್ನೆಲೆ ಅನಂತ್‌ನಾಗ್ ಜಿಲ್ಲೆಯ ಶ್ರೀಗುಫ್ವಾರ ಪ್ರದೇಶದಲ್ಲಿ ಶೋಧ ಕಾರ್ಯಾಚರಣೆ ಪ್ರಾರಂಭಿಸಲಾಗಿತ್ತು. ಬೆಳಗ್ಗೆ 6.40 ರ ಸುಮಾರಿಗೆ ಅಡಗಿ ಕೂತಿರುವ ಉಗ್ರರು ಭದ್ರತಾ ಪಡೆಗಳ ಮೇಲೆ ಗುಂಡು ಹಾರಿಸಿದರು. ಹೀಗಾಗಿ ಕಾರ್ಯಾಚರಣೆ ಪ್ರಾರಂಭಿಸಲಾಗಿತ್ತು.

ಭಾನುವಾರ ಉತ್ತರ ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯ ಸೊಪೋರ್‌ನ ಗುಲ್ಶನ್ ಅಬಾದ್ ರೆಬನ್ ಗ್ರಾಮದಲ್ಲಿ ಭದ್ರತಾ ಪಡೆಗಳು ಮತ್ತು ಉಗ್ರರ ನಡುವೆ ನಡೆದ ಎನ್‌ಕೌಂಟರ್‌ನಲ್ಲಿ ಮೂವರು ಉಗ್ರರು ಮೃತಪಟ್ಟಿದ್ದರು.

Last Updated : Jul 13, 2020, 12:49 PM IST

ABOUT THE AUTHOR

...view details