ಮುಂಬೈ:ಕೇಂದ್ರ ಸರ್ಕಾರ ಜಾರಿಗೊಳಿಸಲು ಮುಂದಾಗಿರುವ ಕೃಷಿ ಮಸೂದೆಗಳಿಗೆ ಈಗಾಗಲೇ ದೇಶಾದ್ಯಂತ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದ್ದು, ಇಂದು ಭಾರತ್ ಬಂದ್ಗೆ ಕರೆ ನೀಡಲಾಗಿದೆ.
ಮಹಾರಾಷ್ಟ್ರದಲ್ಲಿ ಕೇಂದ್ರ ಕೃಷಿ ಮಸೂದೆ ಜಾರಿ ಮಾಡಲ್ಲ: ಡಿಸಿಎಂ ಅಜಿತ್ ಪವಾರ್ - ಮಹಾರಾಷ್ಟ್ರದಲ್ಲಿ ಕೇಂದ್ರ ಕೃಷಿ ಮಸೂದೆ
ನೂತನ ಕೃಷಿ ಮಸೂದೆ ಮಹಾರಾಷ್ಟ್ರದಲ್ಲಿ ಜಾರಿಗೊಳಿಸುವುದಿಲ್ಲ ಎಂದು ಉಪ ಮುಖ್ಯಮಂತ್ರಿ ಅಜಿತ್ ಪವಾರ್ ಹೇಳಿಕೆ ನೀಡಿದ್ದಾರೆ.
ಇದೇ ವಿಚಾರವಾಗಿ ಮಾತನಾಡಿರುವ ಉಪ ಮುಖ್ಯಮಂತ್ರಿ ಅಜಿತ್ ಪವಾರ್, ಮಹಾರಾಷ್ಟ್ರದಲ್ಲಿ ಈ ಮಸೂದೆಗಳು ಜಾರಿಗೊಳ್ಳುವುದಿಲ್ಲ ಎಂದು ಸ್ಪಷ್ಟ ಪಡಿಸಿದ್ದಾರೆ. ಈ ಮಸೂದೆಗಳ ಕುರಿತು ಕಾನೂನು ಜಟಿಲತೆ, ಅಡೆ-ತಡೆ, ತೊಂದರೆ ಸೇರಿದಂತೆ ಲಾಭ-ನಷ್ಟದ ಬಗ್ಗೆ ಅಧ್ಯಯನ ಮಾಡುತ್ತಿದ್ದೇವೆ. ಕೇಂದ್ರದಲ್ಲಿ ಈ ಮಸೂದೆಗಳು ತರಾತುರಿಯಲ್ಲಿ ಅಂಗೀಕಾರಗೊಂಡಿವೆ ಎಂದು ಅವರು ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.
ಲೋಕಸಭೆಯಲ್ಲಿ ಕೃಷಿ ವಲಯಕ್ಕೆ ಸಂಬಂಧಿಸಿದ ಮೂರು ಮಹತ್ವದ ಮಸೂದೆಗಳಿಗೆ ಅನುಮೋದನೆ ಸಿಕ್ಕಿವೆ. ರೈತರ ಉತ್ಪಾದನೆ ವ್ಯಾಪಾರ ಮತ್ತು ವಾಣಿಜ್ಯ (ಪ್ರೋತ್ಸಾಹ ಮತ್ತು ನೆರವು) ವಿಧೇಯಕ-2020, ರೈತರ ಬೆಳೆಗೆ (ಸಬಲೀಕರಣ ಮತ್ತು ಸಂರಕ್ಷಣೆ) ಬೆಲೆ ಭರವಸೆ ಮತ್ತು ಕೃಷಿ ಸೇವೆಗಳ ಒಪ್ಪಂದ ವಿಧೇಯಕ 2020 ಅಂಗೀಕಾರಗೊಂಡಿವೆ. ಇದರ ವಿರುದ್ಧ ದೇಶಾದ್ಯಂತ ಇಂದು ಪ್ರತಿಭಟನೆ ನಡೆಯುತ್ತಿದೆ.