ಕರ್ನಾಟಕ

karnataka

By

Published : Dec 2, 2019, 5:38 PM IST

Updated : Dec 2, 2019, 5:53 PM IST

ETV Bharat / bharat

ಪಶುವೈದ್ಯೆ ಪ್ರಕರಣ: ಆರೋಪಿಗಳನ್ನು 10 ದಿನ ಪೊಲೀಸ್​​​​​ ಕಸ್ಟಡಿಗೆ ಕೋರಿ ಅರ್ಜಿ, ಪಾಟ್ನಾದಲ್ಲಿ ವೈದ್ಯರ ಪ್ರತಿಭಟನೆ

ಹೈದರಾಬಾದ್​​ನ ಪಶುವೈದ್ಯೆಯ ಮೇಲೆ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಆರೋಪಿಗಳನ್ನು 10 ದಿನಗಳ ಕಾಲ ಪೊಲೀಸ್​ ಕಸ್ಟಡಿಗೆ ನೀಡುವಂತೆ ಕೋರಿ ಶಾದ್​ನಗರ ಪೊಲೀಸರು ರಂಗಾರೆಡ್ಡಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ.

eterinary doctor gang rape and murder case
ಪಶುವೈದ್ಯೆ ಪೈಶಾಚಿಕ ಕೃತ್ಯ

ರಂಗಾರೆಡ್ಡಿ (ತೆಲಂಗಾಣ): ಪಶುವೈದ್ಯೆಯ ಮೇಲೆ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಆರೋಪಿಗಳನ್ನು 10 ದಿನಗಳ ಕಾಲ ಪೊಲೀಸ್​ ಕಸ್ಟಡಿಗೆ ನೀಡುವಂತೆ ಕೋರಿ ಶಾದ್​ನಗರ ಪೊಲೀಸರು ರಂಗಾರೆಡ್ಡಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ.

ನ. 28 ರಂದು ಹೈದರಾಬಾದ್​​ನ ಪಶುವೈದ್ಯೆಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಕಾಮುಕರು, ಬಳಿಕ ಆಕೆಯ ದೇಹವನ್ನು ಸುಟ್ಟು ಕೊಲೆ ಮಾಡಿದ್ದರು. ಪ್ರಕರಣ ಸಂಬಂಧ ನಾಲ್ವರು ಆರೋಪಿಗಳನ್ನು ಸೈಬರಾಬಾದ್​ ಪೊಲೀಸರು ಬಂಧಿಸಿದ್ದರು. ಬಳಿಕ ರಂಗಾರೆಡ್ಡಿ ಕೋರ್ಟ್​, 14 ದಿನಗಳ ಕಾಲ ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿತ್ತು. ಇದೀಗ ಆರೋಪಿಗಳನ್ನು 10 ದಿನಗಳ ಕಾಲ ಪೊಲೀಸ್​ ಕಸ್ಟಡಿಗೆ ನೀಡುವಂತೆ ಶಾದ್​ನಗರ ಪೊಲೀಸರು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ.

ಅಲ್ಲದೇ ಅಪರಾಧ ಸಂಬಂಧ FIR ದಾಖಲಿಸುವಲ್ಲಿ ವಿಳಂಬ ಮಾಡಿದ ಆರೋಪದ ಮೇಲೆ ಮೂವರು ಪೊಲೀಸರನ್ನು ಸೇವೆಯಿಂದ ಅಮಾನತು ಮಾಡಲಾಗಿದೆ.

ಪಾಟ್ನಾದಲ್ಲಿ ವೈದ್ಯರ ಪ್ರತಿಭಟನೆ:

ಇನ್ನು ದೇಶಾದ್ಯಂತ ಪೈಶಾಚಿಕ ಕೃತ್ಯವನ್ನು ಖಂಡಿಸಿ, ಆರೋಪಿಗಳಿಗೆ ಮರಣದಂಡನೆ ಶಿಕ್ಷೆ ವಿಧಿಸುವಂತೆ ಆಗ್ರಹಿಸಿ ಪ್ರತಿಭಟನೆಗಳು ನಡೆಯುತ್ತಿವೆ. ಇಂದು ಬಿಹಾರದ ಪಾಟ್ನಾದಲ್ಲಿ ಆರೋಪಿಗಳಿಗೆ ಮರಣದಂಡನೆ ವಿಧಿಸುವಂತೆ ಆಗ್ರಹಿಸಿ ನೂರಾರು ವೈದ್ಯರು ಪ್ರತಿಭಟನೆ ನಡೆಸಿದ್ದಾರೆ.

ಚಂಡೀಗಢದಲ್ಲಿ ಮಹಿಳಾ ಕಾಂಗ್ರೆಸ್​ ವತಿಯಿಂದ ಘಟನೆ ಖಂಡಿಸಿ ಪ್ರತಿಭಟನೆ ನಡೆಸಿದ್ದಾರೆ.

Last Updated : Dec 2, 2019, 5:53 PM IST

For All Latest Updates

ABOUT THE AUTHOR

...view details