ಕರ್ನಾಟಕ

karnataka

ETV Bharat / bharat

ಪೌರತ್ವ ಪ್ರತಿಭಟನೆ: ಎಸ್‌ಪಿ ಮುಖಂಡರೂ ಸೇರಿ 17 ಜನರ ವಿರುದ್ಧ ಪ್ರಕರಣ - ಪೌರತ್ವ ಕಾಯ್ದೆ ವಿರುದ್ಧ ಪ್ರತಿಭಟನೆ

ಪೌರತ್ವ ಕಾಯ್ದೆ ವಿರುದ್ಧ ಪ್ರತಿಭಟನೆಗಳು ಹಿಂಸಾತ್ಮಕವಾಗುತ್ತಿರುವ ಕಾರಣ ಸಮಾಜವಾದಿ ಪಕ್ಷದ (ಎಸ್‌ಪಿ) ಮುಖಂಡರು ಸೇರಿದಂತೆ 17 ಜನರ ವಿರುದ್ಧ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ.

Samajwadi Party leaders
ಪೌರತ್ವ ಕಾಯ್ದೆ ವಿರುದ್ಧ ಪ್ರತಿಭಟನೆ

By

Published : Dec 20, 2019, 11:46 AM IST

ಸಂಭಾಲ್ (ಉತ್ತರ ಪ್ರದೇಶ) : ಜಿಲ್ಲೆಯಲ್ಲಿ ಪೌರತ್ವ ಕಾಯ್ದೆ ವಿರುದ್ಧ ಪ್ರತಿಭಟನೆಗಳು ಹಿಂಸಾತ್ಮಕವಾಗುತ್ತಿರುವ ಕಾರಣ ಸಮಾಜವಾದಿ ಪಕ್ಷದ (ಎಸ್‌ಪಿ) ಮುಖಂಡರೂ ಸೇರಿದಂತೆ ಒಟ್ಟು 17 ಜನರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ.

ನಿನ್ನೆ ಪ್ರತಿಭಟನೆ ವೇಳೆ ರಾಜ್ಯ ಸಾರಿಗೆ ಬಸ್‌ಗೆ ಬೆಂಕಿ ಹಚ್ಚಲಾಗಿತ್ತು. ಈ ಹಿನ್ನೆಲೆಯಲ್ಲಿ ಸಮಾಜವಾದಿ ಪಕ್ಷದ ಸಂಸದ ಶಫಿಕೂರ್ ರಹಮಾನ್ ಬಾರ್ಕ್ ಮತ್ತು ಫಿರೋಜ್ ಖಾನ್ ಸೇರಿದಂತೆ ಹಲವರ ವಿರುದ್ಧ ಕೇಸ್‌​ ದಾಖಲಿಸಲಾಗಿದೆ.

ಕಾನೂನು ಸುವ್ಯವಸ್ಥೆ ಕಾಪಾಡುವ ಸಲುವಾಗಿ ರಾಜ್ಯದ ವಿವಿಧ ಭಾಗಗಳಲ್ಲಿ ನಿಷೇಧಾಜ್ಞೆ (ಸೆಕ್ಷನ್ -144) ಜಾರಿಗೊಳಿಸಲಾಗಿದೆ.

ABOUT THE AUTHOR

...view details