ಕರ್ನಾಟಕ

karnataka

ETV Bharat / bharat

ದೆಹಲಿಯಿಂದ ಬೆಂಗಳೂರಿಗೆ ಬರುತ್ತಿದ್ದ ರಾಜಧಾನಿ ಎಕ್ಸ್​ಪ್ರೆಸ್​ನಲ್ಲಿ ಕಾಣಿಸಿಕೊಂಡ ಬೆಂಕಿ - ಹೈದರಾಬಾದ್

ದೆಹಲಿಯಿಂದ ಬೆಂಗಳೂರಿಗೆ ಬರುತ್ತಿದ್ದ ರಾಜಧಾನಿ ಎಕ್ಸ್‌ಪ್ರೆಸ್ ನವಾಂಡ್ಗಿ ರೈಲ್ವೆ ನಿಲ್ದಾಣವನ್ನು ಹಾದು ಹೋಗುತ್ತಿದ್ದಾಗ ಎಕ್ಸ್‌ಪ್ರೆಸ್ ರೈಲಿನ ಇಂಜಿನ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದೆ.

rajdhani
ಎಕ್ಸ್‌ಪ್ರೆಸ್​ನಲ್ಲಿ ಬೆಂಕಿ

By

Published : Jan 4, 2021, 8:48 AM IST

Updated : Jan 4, 2021, 8:59 AM IST

ಹೈದರಾಬಾದ್(ತೆಲಂಗಾಣ):ತೆಲಂಗಾಣದ ವಿಕರಾಬಾದ್ ಜಿಲ್ಲೆಯ ಬಳಿ ದೆಹಲಿಯಿಂದ ಬೆಂಗಳೂರಿಗೆ ಬರುತ್ತಿದ್ದ ರಾಜಧಾನಿ ಎಕ್ಸ್‌ಪ್ರೆಸ್ ರೈಲಿನ ಇಂಜಿನ್‌ನಲ್ಲಿ ಭಾನುವಾರ ರಾತ್ರಿ ಬೆಂಕಿ ಕಾಣಿಸಿಕೊಂಡಿತ್ತು ಎಂದು ದಕ್ಷಿಣ ಮಧ್ಯ ರೈಲ್ವೆ (ಎಸ್‌ಸಿಆರ್) ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಎಲ್ಲ ಪ್ರಯಾಣಿಕರು ಸುರಕ್ಷಿತವಾಗಿದ್ದಾರೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ರಾತ್ರಿ 9 ಗಂಟೆ ಸುಮಾರಿಗೆ ನವದೆಹಲಿಯಿಂದ ಬೆಂಗಳೂರಿಗೆ ತೆರಳುತ್ತಿದ್ದ ರಾಜಧಾನಿ ಎಕ್ಸ್‌ಪ್ರೆಸ್ ನವಾಂಡ್ಗಿ ರೈಲ್ವೆ ನಿಲ್ದಾಣವನ್ನು ಹಾದು ಹೋಗುತ್ತಿದ್ದಾಗ ಈ ಘಟನೆ ಸಂಭವಿಸಿದೆ ಎಂದು ಎಸ್‌ಸಿಆರ್ ಮುಖ್ಯ ಸಾರ್ವಜನಿಕ ಸಂಪರ್ಕ ಅಧಿಕಾರಿ ರಾಕೇಶ್ ತಿಳಿಸಿದ್ದಾರೆ.

ಲೊಕೊ ಪೈಲಟ್ ಲೋಕೋಮೋಟಿವ್​ನಿಂದ ಹೊಗೆ ಬರುವುದನ್ನು ಗಮನಿಸಿದರು. ತಕ್ಷಣವೇ ಮುನ್ನೆಚ್ಚರಿಕೆ ಕ್ರಮವಾಗಿ ರೈಲು ನಿಲ್ಲಿಸಿದರು. ಸಣ್ಣ ಜ್ವಾಲೆಗಳು ಸ್ಫೋಟಗೊಂಡ ಕಾರಣ ಅದು ಇಂಜಿನ್‌ನ ಒಂದು ಸಣ್ಣ ಭಾಗಕ್ಕೆ ಸೀಮಿತವಾಗಿತ್ತು, ಹಾಗಾಗಿ ಅದನ್ನು ಬೋಗಿಗಳಿಂದ ಬೇರ್ಪಡಿಸಲಾಯಿತು ಎಂದು ಹೇಳಿದರು.

ತಕ್ಷಣ ಅಗ್ನಿಶಾಮಕ ದಳ ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸುವ ಕಾರ್ಯ ಮಾಡಿದರು. ಬೆಂಕಿಯ ಹೊತ್ತಿಕೊಂಡದ್ದಕ್ಕೆ ನಿಖರ ಕಾರಣವನ್ನು ಕಂಡು ಹಿಡಿಯಲಾಗುತ್ತಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

Last Updated : Jan 4, 2021, 8:59 AM IST

ABOUT THE AUTHOR

...view details