ನವದೆಹಲಿ:ಜೂನ್ 20ರಂದು ಗರೀಬ್ ಕಲ್ಯಾಣ್ ರೋಜ್ಗಾರ್ ಯೋಜನೆಗೆ ಪ್ರಧಾನಿ ಮೋದಿ ಚಾಲನೆ ನೀಡಲಿದ್ದಾರೆ. ಈ ಯೋಜನೆಯ ಲಾಭ ಮಾತ್ರ ಕರ್ನಾಟಕಕ್ಕೆ ಸಿಗುವುದಿಲ್ಲ. ಈ ಬಗ್ಗೆ ಇಂದು ಸುದ್ದಿಗೋಷ್ಠಿ ನಡೆಸಿದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಾಹಿತಿ ನೀಡಿದರು.
ವಲಸೆ ಕಾರ್ಮಿಕರಿಗೆ ಗರೀಬ್ ಕಲ್ಯಾಣ್ ಯೋಜನೆ; ಈ ಆರು ರಾಜ್ಯಗಳಲ್ಲಿ ಅನುಷ್ಠಾನ - ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್
ವಲಸೆ ಕಾರ್ಮಿಕರಿಗಾಗಿ ಕೇಂದ್ರ ಸರ್ಕಾರ 50 ಸಾವಿರ ಕೋಟಿ ಮೊತ್ತದ ಗರೀಬ್ ಕಲ್ಯಾಣ್ ಯೋಜನೆ ಜಾರಿಗೆ ತರಲಿದ್ದು, ಇದರ ಲಾಭ ಕರ್ನಾಟಕಕ್ಕೆ ಸಿಗುವುದಿಲ್ಲ.

ಬಿಹಾರದಲ್ಲಿ ಜೂನ್ 20ರಂದು ಪ್ರಧಾನಿ ನರೇಂದ್ರ ಮೋದಿ ಈ ಯೋಜನೆಗೆ ಚಾಲನೆ ನೀಡಲಿದ್ದಾರೆ. ಬಿಹಾರ, ಜಾರ್ಖಂಡ್, ಉತ್ತರಪ್ರದೇಶ, ಮಧ್ಯಪ್ರದೇಶ, ಒಡಿಶಾ ಹಾಗೂ ರಾಜಸ್ಥಾನದ 116 ಜಿಲ್ಲೆಗಳು ಮಾತ್ರ ಈ ಯೋಜನೆಯ ಲಾಭ ಪಡೆದುಕೊಳ್ಳಲಿವೆ ಎಂದು ತಿಳಿಸಿದರು. ಈ ಯೋಜನೆಯ ಮೂಲಕ ಒಟ್ಟು 125 ದಿನಗಳ ಕಾಲ ಕಾರ್ಮಿಕರಿಗೆ ಉದ್ಯೋಗ ದೊರೆಯಲಿದ್ದು 25 ಯೋಜನೆಗಳು ಇದರಲ್ಲಿ ಸೇರಿವೆ.
ಸ್ವಚ್ಛತೆ, ರಸ್ತೆ, ಗ್ರಾಮ ಪಂಚಾಯತ್ಗಳಲ್ಲಿರುವ ಕಟ್ಟಡಗಳ ನಿರ್ಮಾಣ, ರಾಷ್ಟ್ರೀಯ ಹೆದ್ದಾರಿ ಕಾಮಗಾರಿ, ಕೆರೆಗಳ ನಿರ್ಮಾಣ, ತೋಟಗಾರಿಕಾ ಚಟುವಟಿಕೆಗಳು ನಡೆಯಲಿವೆ. ಕೇಂದ್ರ ಸರ್ಕಾರದ ಈ ಯೋಜನೆಯಡಿಯಲ್ಲಿ 25 ಸಾವಿರ ವಲಸೆ ಕಾರ್ಮಿಕರು ಆರು ವಿವಿಧ ಕಾಮಗಾರಿ ಯೋಜನೆಗಳಲ್ಲಿ ಪಾಲ್ಗೊಳ್ಳಲ್ಲಿದ್ದಾರೆ. ವಾರ್ಷಿಕ 125 ದಿನಗಳ ಕಾಲ ಅವರಿಗೆ ಉದ್ಯೋಗ ದೊರೆಯಲಿದೆ ಎಂದು ತಿಳಿದು ಬಂದಿದೆ.