ಹೈದರಾಬಾದ್: ಟಿಡಿಪಿ ಪಕ್ಷದ ಹಿರಿಯ ನಾಯಕ ಮತ್ತು ಆಂಧ್ರಪ್ರದೇಶ ವಿಧಾನಸಭೆ ಮಾಜಿ ಸ್ಪೀಕರ್ ಕೊಡೆಲಾ ಶಿವಪ್ರಸಾದ್ ರಾವ್ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ.
ಆಂಧ್ರ ಮಾಜಿ ಸ್ಪೀಕರ್ ಶಿವಪ್ರಸಾದ್ ರಾವ್ ಸಾವು.. ಆತ್ಮಹತ್ಯೆ ಶಂಕೆ!
ಆಂಧ್ರಪ್ರದೇಶ ವಿಧಾನಸಭೆ ಮಾಜಿ ಸ್ಪೀಕರ್ ಕೊಡೆಲಾ ಶಿವಪ್ರಸಾದ್ ರಾವ್ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ.
ಶಿವಪ್ರಸಾದ್ ರಾವ್
ಮೂಲಗಳ ಪ್ರಕಾಕ ಶಿವಪ್ರಸಾದ್ ರಾವ್ ಅವರಿಗೆ ಮನೆಯಲ್ಲಿ ಹೃದಯಾಘಾತ ಸಂಭವಿಸಿದ್ದರಿಂದ ಖಾಸಗಿ ಆಸ್ಪತ್ರೆಗೆ ಕರೆತರಲಾಗಿತ್ತು ಎಂದು ತಿಳಿದು ಬಂದಿದೆ.
ಆದರೆ, ಶಿವಪ್ರಸಾದ್ ರಾವ್ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎಂದು ಕುಟುಂಬಸ್ಥರು ಮಾಹಿತಿ ನೀಡಿದ್ದಾರೆ. ಈ ಬಗ್ಗೆ ಮಾತನಾಡಿರುವ ಹೈದರಾಬಾದ್ ಪಶ್ಚಿಮ ವಿಭಾಗದ ಡಿಸಿಪಿ ಶ್ರೀನಿವಾಸ್, ಶಿವಪ್ರಸಾದ್ ರಾವ್ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎಂದು ಕುಟುಂಬಸ್ಥರು ಮಾಹಿತಿ ನೀಡಿದ್ದಾರೆ. ಆದರೆ, ಮರಣೋತ್ತರ ಪರೀಕ್ಷೆ ನಂತರವಷ್ಟೇ ಸಾವಿಗೆ ನಿಖರ ಕಾರಣ ಏನು ಎಂಬುದು ಬಹಿರಂಗವಾಗಲಿದೆ.