ನವದೆಹಲಿ:ದೇಶ ಕಂಡ ಚಾಣಾಕ್ಷ ರಾಜಕಾರಣಿ, ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರ ಅಂತ್ಯಕ್ರಿಯೆಯನ್ನು ಸಕಲ ಸರ್ಕಾರಿ ಸೇನಾ ಗೌರವದೊಂದಿಗೆ ನವದೆಹಲಿಯ ಲೋಧಿ ರಸ್ತೆಯ ಚಿತಾಗಾರದಲ್ಲಿ ನಡೆಯಿತು. ಪ್ರಣಬ್ ಮುಖರ್ಜಿ ಅವರ ಮಗ ಅಭಿಜಿತ್ ಮುಖರ್ಜಿ ತಂದೆಯ ಅಂತ್ಯ ಸಂಸ್ಕಾರ ನೆರವೇರಿಸಿದರು.
ಇದಕ್ಕೂ ಮೊದಲು ರಾಜಾಜಿ ಮಾರ್ಗ್ ರಸ್ತೆಯಲ್ಲಿರುವ ಅವರ ನಿವಾಸದಲ್ಲಿ ಬೆಳಗ್ಗೆ 9ರಿಂದ ಪಾರ್ಥಿವ ಶರೀರವನ್ನ ಸಾರ್ವಜನಿಕ ದರ್ಶನಕ್ಕೆ ಇಡಲಾಗಿತ್ತು. ಈ ವೇಳೆ ರಾಷ್ಟ್ರಪತಿ ರಾಮನಾಥ್ ಕೋವಿಂದ್, ಉಪ ರಾಷ್ಟ್ರಪತಿ ಎಂ. ವೆಂಕಯ್ಯ ನಾಯ್ಡು, ಪ್ರಧಾನಿ ಮೋದಿ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅಂತಿಮ ನಮನ ಸಲ್ಲಿಸಿದರು.