ಕರ್ನಾಟಕ

karnataka

ETV Bharat / bharat

ಭೀಕರ ರಸ್ತೆ ಅಪಘಾತ: ಕರ್ನಾಟಕದ ಓರ್ವ ಸೇರಿ ನಾಲ್ವರ ಸಾವು - ಆಂಧ್ರಪ್ರದೇಶ ರಸ್ತೆ ಅಪಘಾತ

ಭೀಕರ ರಸ್ತೆ ಅಪಘಾತದಲ್ಲಿ ಕರ್ನಾಟಕದ ವ್ಯಕ್ತಿ ಸೇರಿದಂತೆ ನಾಲ್ವರು ಸಾವನ್ನಪ್ಪಿರುವ ಘಟನೆ ಆಂಧ್ರ ಪ್ರದೇಶದಲ್ಲಿ ನಡೆದಿದೆ.

ಭೀಕರ ರಸ್ತೆ ಅಪಘಾತದಲ್ಲಿ ಕರ್ನಾಟಕದ ವ್ಯಕ್ತಿ ಸೇರಿ ನಾಲ್ವರ ಸಾವು

By

Published : Nov 3, 2019, 3:33 PM IST

ಕೃಷ್ಣಾ: ರಸ್ತೆ ಅಪಘಾತವೊಂದರಲ್ಲಿ ಕರ್ನಾಟಕದ ವ್ಯಕ್ತಿ ಸೇರಿ ನಾಲ್ವರು ಸಾವನ್ನಪ್ಪಿರುವ ಘಟನೆ ಜಗ್ಗಯ್ಯಪೇಟ ತಾಲೂಕಿನ ಗರಿಕಪಾಡುವಿನಲ್ಲಿ ನಡೆದಿದೆ.

ಹೈದರಾಬಾದ್​ನಿಂದ ವಿಜಯವಾಡಕ್ಕೆ ತೆರಳುತ್ತಿದ್ದ ಮಾರುತಿ ಎರ್ಟಿಗಾ ಕಾರು ನಿಯಂತ್ರಣ ತಪ್ಪಿ ಡಿವೈಡರ್​ಗೆ ಡಿಕ್ಕಿ ಹೊಡೆದಿದ್ದು, ಎದರುಗಡೆ ವಿಜಯವಾಡದಿಂದ ಹೈದರಾಬಾದ್​ ಕಡೆಗೆ ಬರುತ್ತಿದ್ದ ಕಾರಿನ ಮೇಲೆ ಬಿದ್ದಿದೆ.

ಇನ್ನು ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇನ್ನಿಬ್ಬರು ಆಸ್ಪತ್ರೆಗೆ ದಾಖಲಿಸುವ ಮಾರ್ಗ ಮಧ್ಯದಲ್ಲೇ ಮೃತಪಟ್ಟಿದ್ದಾರೆ. ಈ ಘಟನೆಯಲ್ಲಿ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದು, ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮೃತರನ್ನು ತೆಲಂಗಾಣದ ಖಮ್ಮಂ ಜಿಲ್ಲೆಯ ನಾರಪೋಗು ಗೋಪಯ್ಯ, ಮಹಾಬೂಬ್​ ನಗರ್​ ಜಿಲ್ಲೆಯ ಭೀಂ ರೆಡ್ಡಿ, ಆಂಧ್ರ ಪ್ರದೇಶದ ಮನ್ಸೂರ್​ ಮತ್ತು ಕರ್ನಾಟಕ ಮೂಲದ ಮಟ್ಟಪಲ್ಲಿ ಭೀಮ್​ ರೆಡ್ಡಿ ಎಂದು ಗುರುತಿಸಲಾಗಿದೆ.

ಈ ಘಟನೆ ಕುರಿತು ಗ್ರಾಮಾಂತರ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.

ABOUT THE AUTHOR

...view details