ಚುರು (ರಾಜಸ್ಥಾನ): ಹಳೇ ದ್ವೇಷವನ್ನಿಟ್ಟುಕೊಂಡು ರಾಜಸ್ಥಾನದ ಚುರು ಜಿಲ್ಲೆಯಲ್ಲಿ ನಡೆದ ಗ್ಯಾಂಗ್ವಾರ್ನಲ್ಲಿ ಇಬ್ಬರು ಗ್ಯಾಂಗ್ಸ್ಟರ್ ಸೇರಿ ನಾಲ್ವರು ಸಾವನ್ನಪ್ಪಿರುವ ಘಟನೆ ನಡೆದಿದೆ.
ಬೈಕ್ ಮೇಲೆ ಬಂದ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದರಿಂದ ಪ್ರದೀಪ್ ಸ್ವಾಮಿ ಹಾಗೂ ಮತ್ತೋರ್ವ ಸಾವನ್ನಪ್ಪಿದ್ದು, ದುಷ್ಕರ್ಮಿಗಳ ಮೇಲೂ ಸಹ ಗುಂಡಿನ ದಾಳಿ ನಡೆದಿದೆ. ಎಸ್ಪಿ ನಾರಾಯಣ್ ಸ್ಥಳಕ್ಕಾಗಮಿಸಿ, ಪರಿಶೀಲನೆ ನಡೆಸಿ ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.