ನವದೆಹಲಿ: ರಾಷ್ಟ್ರಪತಿ ಭವನದಲ್ಲಿ ಜಮ್ಮು ಮತ್ತು ಕಾಶ್ಮೀರ ಮಾಜಿ ಲೆಫ್ಟಿನೆಂಟ್ ಗವರ್ನರ್ ಗಿರೀಶ್ ಚಂದ್ರ ಮುರ್ಮು ಅವರು ಭಾರತದ ಕಂಟ್ರೋಲರ್ ಮತ್ತು ಆಡಿಟರ್ ಜನರಲ್ (ಸಿಎಜಿ) ಆಗಿ ಪ್ರಮಾಣ ವಚನ ಸ್ವೀಕರಿಸಿದರು.
ರಾಷ್ಟ್ರಪತಿ ರಾಮ್ನಾಥ್ ಕೋವಿಂದ್ ಅವರು ಮುರ್ಮು ಅವರಿಗೆ ಸಿಎಜಿ ಆಗಿ ಪ್ರಮಾಣವಚನ ಮತ್ತು ಗೌಪತ್ಯ ಬೋಧಿಸಿದರು. 1985ರ ಬ್ಯಾಚ್ನ ಐಎಎಸ್ ಅಧಿಕಾರಿಯಾಗಿದ್ದ ಮುರ್ಮು ಬುಧವಾರ ತಮ್ಮ ರಾಜೀನಾಮೆಯನ್ನು ಸಲ್ಲಿಸಿದ್ದರು. ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡಿದ್ದ ಸಂವಿಧಾನದ 370 ನೇ ವಿಧಿಯನ್ನು ರದ್ದುಪಡಿಸಿ ಕೇಂದ್ರಾಡಳಿತ ಪ್ರದದೇಶವಾಗಿ ಘೋಷಣೆ ಮಾಡಿದ ನಂತರ ಕೇಂದ್ರಾಡಳಿತ ಪ್ರದೇಶಗಳು ಮೊದಲ ವಾರ್ಷಿಕೋತ್ಸವ ಆಚರಿಸುವ ಸಂದರ್ಭದಲ್ಲಿ ಮುರ್ಮು ರಾಜೀನಾಮೆ ಕುತೂಹಲಕ್ಕೆ ಕಾರಣವಾಗಿತ್ತು.