ಕರ್ನಾಟಕ

karnataka

ETV Bharat / bharat

ಪಿಜಿಐ ಆಸ್ಪತ್ರೆಯಿಂದ ಹರ್ಸಿಮ್ರತ್​ ಕೌರ್​ ಬಾದಲ್ ಡಿಸ್ಚಾರ್ಜ್​

ಶನಿವಾರ ರಾತ್ರಿ ನಗರದ ಸ್ನಾತಕೋತ್ತರ ವೈದ್ಯಕೀಯ ಶಿಕ್ಷಣ ಮತ್ತು ಸಂಶೋಧನಾ ಸಂಸ್ಥೆಯಿಂದ (ಪಿಜಿಐ) ಬಿಡುಗಡೆ ಮಾಡಲಾಗಿದೆ. ಅವರಿಗೆ ಉಸಿರಾಟದ ಸಮಸ್ಯೆ ಕಂಡು ಬಂದ ಹಿನ್ನೆಲೆ ಪಿಜಿಐ ಆಸ್ಪತ್ರೆಗೆ ದಾಖಲಿಸಲಾಗಿತ್ತು..

By

Published : Dec 6, 2020, 2:08 PM IST

ಹರ್ಸಿಮ್ರತ್​ ಕೌರ್​ ಬಾದಲ್
ಹರ್ಸಿಮ್ರತ್​ ಕೌರ್​ ಬಾದಲ್

ಚಂಡೀಗಢ :ಕೇಂದ್ರದ ಮಾಜಿ ಸಚಿವೆ ಮತ್ತು ಶಿರೋಮಣಿ ಅಕಾಲಿ ದಳದ ನಾಯಕಿ ಹರ್ಸಿಮ್ರತ್​ ಕೌರ್​ ಬಾದಲ್​ ಅವರು ಕೊರೊನಾದಿಂದ ಗುಣಮುಖರಾಗಿ ಶನಿವಾರ ರಾತ್ರಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.

ಶನಿವಾರ ರಾತ್ರಿ ನಗರದ ಸ್ನಾತಕೋತ್ತರ ವೈದ್ಯಕೀಯ ಶಿಕ್ಷಣ ಮತ್ತು ಸಂಶೋಧನಾ ಸಂಸ್ಥೆಯಿಂದ (ಪಿಜಿಐ) ಬಿಡುಗಡೆ ಮಾಡಲಾಗಿದೆ. ಅವರಿಗೆ ಉಸಿರಾಟದ ಸಮಸ್ಯೆ ಕಂಡು ಬಂದ ಹಿನ್ನೆಲೆ ಪಿಜಿಐ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಉತ್ತರ ಪ್ರದೇಶ : ಪೊಲೀಸ್ ಇನ್ಸ್‌ಪೆಕ್ಟರ್​​ರಿಂದ ಅತ್ಯಾಚಾರ ಆರೋಪ, ಪ್ರಕರಣ ದಾಖಲು

"ಹರ್ಸಿಮ್ರತ್ ಕೌರ್ ಬಾದಲ್ ಅವರನ್ನು ಶನಿವಾರ ಚಂಡೀಗಢದ ಪಿಜಿಐ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕೊರೊನಾ ನೆಗೆಟಿವ್​ ಬಂದ ಹಿನ್ನೆಲೆ ಕಳೆದ ರಾತ್ರಿ ಬಿಡುಗಡೆ ಮಾಡಲಾಗಿದೆ. ಅವರು ಕೊರೊನಾದಿಂದ ಗುಣಮುಖರಾಗಿದ್ದಾರೆ" ಎಂದು ಚಂಡೀಗಢದ ಪಿಜಿಐ ಆಸ್ಪತ್ರೆಯವರು ತಿಳಿಸಿದ್ದಾರೆ.

ABOUT THE AUTHOR

...view details