ನವದೆಹಲಿ: ಕೇಂದ್ರದ ಮೂರು ಕೃಷಿ ಕಾನೂನುಗಳನ್ನು ವಿರೋಧಿಸಿ ಗಣರಾಜ್ಯೋತ್ಸವದಂದು ಟ್ರ್ಯಾಕ್ಟರ್ ಪರೇಡ್ ನಡೆಸಲು ರೈತ ಸಂಘಟನೆಗಳು ನಿರ್ಧರಿಸಿದ್ದು, ಗಣರಾಜ್ಯೋತ್ಸವದಂದು ಉದ್ದೇಶಿತ ಟ್ರ್ಯಾಕ್ಟರ್ ಮೆರವಣಿಗೆಗೆ ತಡೆಯಾಜ್ಞೆ ನೀಡುವಂತೆ ನಿರ್ದೇಶನ ಕೋರಿ ಕೇಂದ್ರ ಸರ್ಕಾರದ ಪರ ದೆಹಲಿ ಪೊಲೀಸರು ಅರ್ಜಿ ಸಲ್ಲಿಸಿದ್ದರು.
ರೈತರ ಟ್ರ್ಯಾಕ್ಟರ್ ಪರೇಡ್ಗೆ ಅನುಮತಿ ವಿಚಾರ: ಇಂದು ಸುಪ್ರೀಂಕೋರ್ಟ್ ವಿಚಾರಣೆ - ಕೇಂದ್ರದ ಮೂರು ಕೃಷಿ ಕಾನೂನು
ಸೋಮವಾರ ಜನವರಿ 18 ರಂದು ಈ ಅರ್ಜಿ ವಿಚಾರಣೆ ವೇಳೆ ಸುಪ್ರೀಂಕೋರ್ಟ್ ಈ ವಿಚಾರಣೆಯನ್ನು ಇಂದಿಗೆ ಮುಂದೂಡಿದ್ದು, ಈ ವಿಚಾರಣೆ ಇಂದು ನಡೆಯಲಿದೆ.

ಸೋಮವಾರ ಜನವರಿ 18 ರಂದು ಈ ಅರ್ಜಿ ವಿಚಾರಣೆ ಕೈಗೆತ್ತಿಕೊಂಡಿತ್ತು. ಈ ವೇಳೆ, ರ್ಯಾಲಿಗೆ ಅನುಮತಿ ನೀಡುವುದು ಪೊಲೀಸರು ಹಾಗೂ ಕಾನೂನು ಸುವ್ಯವಸ್ಥೆಗೆ ಸಂಬಂಧಿಸಿದ್ದು ಎಂದು ಹೇಳಿತ್ತು. ಅಷ್ಟೇ ಅಲ್ಲ ಅದನ್ನ ಪೊಲೀಸರ ವಿವೇಚನೆಗೆ ಬಿಡುವುದಾಗಿ ಹೇಳಿತ್ತು. ಅಷ್ಟೇ ಅಲ್ಲ ಈ ಬಗೆಗಿನ ವಿಚಾರಣೆಯನ್ನ ಇಂದಿಗೆ ಮುಂದೂಡಿತ್ತು. ದೆಹಲಿ ಪೊಲೀಸರು ಸುಪ್ರೀಂಕೋರ್ಟ್ಗೆ ಅರ್ಜಿ ಸಲ್ಲಿಸಿ ಮೆರವಣಿಗೆಗೆ ತಡೆ ನೀಡುವಂತೆ ಕೋರಿತ್ತು. ಈ ಸಂಬಂಧ ವಿಚಾರಣೆ ನಡೆಸಿದ್ದ ಕೋರ್ಟ್ ಜನವರಿ 12 ರಂದು ರೈತ ಸಂಘಟನೆಗಳಿಗೆ ನೋಟಿಸ್ ನೀಡಿತ್ತು.
ಓದಿ : ಟ್ರ್ಯಾಕ್ಟರ್ ಪರೇಡ್ ತಡೆಗೆ ಯಾವುದೇ ಆದೇಶ ನೀಡಲು ಸುಪ್ರೀಂ ನಕಾರ: ಅರ್ಜಿ ವಿಚಾರಣೆ ಮುಂದೂಡಿಕೆ