ನವದೆಹಲಿ : ಬೇನಾಮಿ ಆಸ್ತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅಳಿಯ ಮತ್ತು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕ ಗಾಂಧಿ ಪತಿಯಾಗಿರುವ ರಾಬರ್ಟ್ ವಾದ್ರಾ ಅವರ ಹೇಳಿಕೆ ದಾಖಲಿಸಲು ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಪ್ರಾರಂಭಿಸಿದ್ದಾರೆ.
ಐಟಿ ವಿಭಾಗದ ಮೂಲಗಳಿಂದ ಬಂದ ಮಾಹಿತಿಯಂತೆ, ಬೇನಾಮಿ ಆಸ್ತಿ ಪ್ರಕರಣಕ್ಕೆ ಸಂಬಂಧಪಟ್ಟಂತೆ ಹೇಳಿಕೆ ದಾಖಲಿಸಲು, ಆದಾಯ ತೆರಿಗೆ ಅಧಿಕಾರಿಗಳ ತಂಡ ವಾದ್ರಾ ನಿವಾಸಕ್ಕೆ ತೆರಳಿದೆ. ಕೊರೊನಾ ಹಿನ್ನೆಲೆ, ಇದುವರೆಗೆ ವಾದ್ರಾ ವಿಚಾರಣೆ ನಡೆಸಲು ಸಾಧ್ಯವಾಗಿರಲಿಲ್ಲ.