ದೆಹಲಿ: ಇಂದು ಅಮೆರಿಕಾ ಹಾಗೂ ಭಾರತದ ನಡುವೆ 2+2 ಸಚಿವರ ಸಂವಾದದ 3 ನೇ ಆವೃತ್ತಿ ನಡೆಯುತ್ತಿದೆ. ದೆಹಲಿಯ ಹೈದರಾಬಾದ್ ಹೌಸ್ನಲ್ಲಿ ನಡೆಯುತ್ತಿರುವ ಸಂವಾದದಲ್ಲಿ ಅಮೆರಿಕಾ ವಿದೇಶಾಂಗ ಕಾರ್ಯದರ್ಶಿ ಮೈಕ್ ಪೊಂಪಿಯೊ, ರಕ್ಷಣಾ ಕಾರ್ಯದರ್ಶಿ ಮಾರ್ಕ್ ಟಿ.ಎಸ್ಪರ್ ಹಾಗೂ ಭಾರತದ ರಕ್ಷಣಾ ಸಚಿವ ರಾಜ್ನಾಥ್ ಸಿಂಗ್, ವಿದೇಶಾಂಗ ಸಚಿವ ಜೈ ಶಂಕರ್ ಭಾಗಿಯಾಗಿದ್ದಾರೆ.
ಪೂರ್ವ ಲಡಾಖ್ ವಿಚಾರವಾಗಿ ಇಂಡೋ-ಚೀನಾ ಗಡಿಯಲ್ಲಿ ಉಭಯ ರಾಷ್ಟ್ರಗಳ ಸೇನೆ ಬೀಡು ಬಿಟ್ಟಿದ್ದು, ಯುದ್ಧದ ವಾತಾವರಣ ನಿರ್ಮಾಣವಾಗಿದೆ. ಇಂಥ ಸಂದರ್ಭದಲ್ಲಿ ಭಾರತ ಹಾಗೂ ಅಮೆರಿಕಾ ನಡುವೆ ನಡೆಯುತ್ತಿರುವ ಸಂವಾದ ಮಹತ್ವ ಪಡೆದುಕೊಂಡಿದೆ.
ಸಂವಾದದಲ್ಲಿ ಎರಡೂ ದೇಶಗಳ ಪ್ರಮುಖ ನಾಯಕರು ಪ್ರತ್ಯೇಕವಾಗಿ ದ್ವಿಪಕ್ಷೀಯ ಸಭೆಗಳನ್ನು ನಡೆಸಿ, ಬಿಕಾ (ಪ್ರಾದೇಶಿಕ ಸಹಕಾರಕ್ಕಾಗಿ ಮೂಲ ವಿನಿಮಯ ಮತ್ತು ಸಹಕಾರ) ಒಪ್ಪಂದಕ್ಕೆ ಸಹಿ ಹಾಕುವುದಕ್ಕೆ ಒಪ್ಪಿವೆ. ಇದು ಭವಿಷ್ಯದ ಮಿಲಿಟರಿ ಸಂಬಂಧಗಳ ವಿಸ್ತರಣೆಗೆ ಸಹಕಾರಿಯಾಗಲಿವೆ.
ಸವಾಲುಗಳನ್ನು ಮುಂದಿಟ್ಟುಕೊಂಡು ವ್ಯವಹಾರ: ರಾಜನಾಥ್ ಸಿಂಗ್
ಇಂಡೋ-ಯುಎಸ್ ಎರಡೂ ಪ್ರಜಾಪ್ರಭುತ್ವ ರಾಷ್ಟ್ರಗಳು. ಕೋವಿಡ್ನಿಂದಾಗಿ ನಮ್ಮ ದೇಶದ ಆರ್ಥಿಕತೆ ನೆಲ ಕಚ್ಚಿದೆ. ಕೈಗಾರಿಗಳು, ಸೇವಾ ಕ್ಷೇತ್ರಗಳನ್ನು ಪುನರುಜ್ಜೀವನಗೊಳಿಸಲು ಪ್ರಯತ್ನಿಸುತ್ತಿದ್ದೇವೆ. ಪ್ರಸ್ತುತ ನಮ್ಮ ಮುಂದಿರುವ ಸವಾಲುಗಳನ್ನು ಗಮನದಲ್ಲಿಟ್ಟುಕೊಂಡು ವ್ಯವಹರಿಸಬೇಕಿದೆ ಎಂದು ಸಭೆಯಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ತಿಳಿಸಿದರು.
ಜಾಗತಿಕ ಸವಾಲು ಎದುರಿಸಲು ಒಂದಾಗಿ ಹೋರಾಟ : ಜೈ ಶಂಕರ್