ನವದೆಹಲಿ:ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಸಂಸದೀಯ ಕ್ಷೇತ್ರವಾದ ವಾರಣಾಸಿಯಲ್ಲಿ ಕೋವಿಡ್ ವ್ಯಾಕ್ಸಿನೇಷನ್ ಫಲಾನುಭವಿಗಳೊಂದಿಗೆ ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಸಂವಾದ ನಡೆಸಲಿದ್ದಾರೆ. ಈ ಕುರಿತಂತೆ ಸ್ವತಃ ಪಿಎಂ ಅವರೇ ಟ್ವೀಟ್ ಮಾಡುವ ಮೂಲಕ ಮಾಹಿತಿ ನೀಡಿದ್ದಾರೆ.
ಕೊರೊನಾ ನಿಯಂತ್ರಣ ಮಾಡುವಲ್ಲಿ ಬಿಜೆಪಿ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದ್ದು, ದೇಶದಾದ್ಯಂತ ಕೋವಿಡ್ ಲಸಿಕೆ ಹಾಕುವ ಅಭಿಯಾನವನ್ನು ಆರಂಭಿಸಿದೆ. ಈ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ವಾರಣಾಸಿಯಲ್ಲಿ ಕೋವಿಡ್ ವ್ಯಾಕ್ಸಿನೇಷನ್ ಫಲಾನುಭವಿಗಳು ಮತ್ತು ವ್ಯಾಕ್ಸಿನೇಟರ್ಗಳೊಂದಿಗೆ ಇಂದು ಮಧ್ಯಾಹ್ನ 1: 15ಕ್ಕೆ ವಿಡಿಯೋ ಸಂವಾದ ನಡೆಸಲಿದ್ದು, ಅವರ ಅನುಭವದ ಕುರಿತು ಮಾಹಿತಿ ಪಡೆಯಲಿದ್ದಾರೆ. ಈ ಸಂಬಂಧ ಪಿಎಂ ಟ್ವೀಟ್ ಮೂಲಕ ಮಾಹಿತಿ ನೀಡಿದ್ದಾರೆ.
ಆರು ಆರೋಗ್ಯ ಕಾರ್ಯಕರ್ತರೊಂದಿಗೆ ಸಂವಾದ :
ಈ ಸಂಬಂಧ ಸಿಎಂಒ ಡಾ.ವಿ.ಬಿ ಸಿಂಗ್ ಅವರು ಮಾಹಿತಿ ನೀಡಿದ್ದು, ವಾರಣಾಸಿ ಜಿಲ್ಲೆಯ ಫಲಾನುಭವಿಗಳೊಂದಿಗೆ ಪ್ರಧಾನಿ ಸಂವಹನ ನಡೆಸಲಿದ್ದಾರೆ. ಮಹಿಳಾ ಆಸ್ಪತ್ರೆ, ಜಿಲ್ಲಾಸ್ಪತ್ರೆ, ಸಿಎಚ್ಸಿ ಆನೆ ಮಾರುಕಟ್ಟೆಯಲ್ಲಿರುವ ನೌಕರರೊಂದಿಗೆ ಈ ಸಂವಾದ ನಡೆಯಲಿದೆ. ದಾದಿ, ವೈದ್ಯರು, ಇಬ್ಬರು ಎಎನ್ಎಂಗಳು, ಸ್ಕ್ಯಾವೆಂಜರ್, ಎಲ್ಟಿ ಸಂವಾದದಲ್ಲಿ ಭಾಗವಹಿಸಲಿದ್ದಾರೆ ಎಂದರು.