ಕರ್ನಾಟಕ

karnataka

By

Published : Dec 15, 2019, 6:33 PM IST

Updated : Dec 15, 2019, 6:59 PM IST

ETV Bharat / bharat

ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ಭುಗಿಲೆದ್ದ ಆಕ್ರೋಶ... ಮೂರು ಬಸ್‌ಗಳಿಗೆ ಬೆಂಕಿ

ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ದೇಶದ ವಿವಿಧೆಡೆ ಪ್ರತಿಭಟನೆಗಳು ಭುಗಿಲೆದ್ದಿವೆ. ಈ ಮಧ್ಯೆ ಜಾಮಿಯಾ ವಿವಿಯಲ್ಲಿ ಪ್ರತಿಭಟನೆ ನಡೆಯುತ್ತಿದ್ದು, ದೆಹಲಿ ಸಾರಿಗೆ ನಿಗಮದ ಮೂರು ಬಸ್‌ಗಳಿಗೆ ಅಲ್ಲಿನ ವಿದ್ಯಾರ್ಥಿಗಳು ಬೆಂಕಿ ಹಚ್ಚಿದ್ದಾರೆ.

ದೆಹಲಿ ಸಾರಿಗೆ ನಿಗಮದ ಮೂರು ಬಸ್‌ಗಳಿಗೆ ಬೆಂಕಿ
ದೆಹಲಿ ಸಾರಿಗೆ ನಿಗಮದ ಮೂರು ಬಸ್‌ಗಳಿಗೆ ಬೆಂಕಿ

ನವದೆಹಲಿ:ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ಜಾಮಿಯಾ ವಿವಿಯಲ್ಲಿ ಪ್ರತಿಭಟನೆ ನಡೆಯುತ್ತಿದ್ದು, ಇದು ತೀವ್ರ ವಿಕೋಪಕ್ಕೆ ತಿರುಗಿದೆ. ದೆಹಲಿ ಸಾರಿಗೆ ನಿಗಮದ (ಡಿಟಿಸಿ) ಮೂರು ಬಸ್‌ಗಳಿಗೆ ಜಾಮಿಯಾ ವಿದ್ಯಾರ್ಥಿಗಳು ಬೆಂಕಿ ಹಚ್ಚಿದ್ದಾರೆ.

ಪೊಲೀಸರು ಮತ್ತು ವಿದ್ಯಾರ್ಥಿಗಳ ನಡುವೆ ತೀವ್ರ ಘರ್ಷಣೆ ಉಂಟಾಗಿದೆ. ಈ ವೇಳೆ ಪೊಲೀಸರು ಪರಿಸ್ಥಿತಿ ನಿಯಂತ್ರಿಸಲು ಲಾಠಿ ಚಾರ್ಜ್ ಮತ್ತು ಅಶ್ರುವಾಯುವನ್ನು ಸಿಡಿಸಿದರು. ಇದರಿಂದ ಕೋಪಗೊಂಡ ವಿದ್ಯಾರ್ಥಿಗಳು ಮೂರು ಬಸ್​ಗಳಿಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದಾರೆ ಎಂದು ತಿಳಿದುಬಂದಿದೆ.

ದೆಹಲಿ ಸಾರಿಗೆ ನಿಗಮದ ಮೂರು ಬಸ್‌ಗಳಿಗೆ ಬೆಂಕಿ

ಈ ಬಗ್ಗೆ ಪ್ರತ್ಯಕ್ಷದರ್ಶಿಯೂ ಆಗಿರುವ ಬಸ್​ನ ಚಾಲಕ ಮತ್ತು ಸೆಕ್ಯೂರಿಟಿ ಗಾರ್ಡ್​ ನಡೆದ ಘಟನೆ ಬಗ್ಗೆ ಎಳೆಎಳೆಯಾಗಿ ಬಿಚ್ಚಿಟ್ಟಿದ್ದಾರೆ. ಅವರ ಎಕ್ಸಕ್ಲೂಸಿವ್​ ಬೈಟ್​ಗಳು​ ಈಟಿವಿ ಭಾರತಕ್ಕೆ ಲಭಿಸಿವೆ...

Last Updated : Dec 15, 2019, 6:59 PM IST

ABOUT THE AUTHOR

...view details