ಕರ್ನಾಟಕ

karnataka

By

Published : Jul 27, 2019, 9:51 AM IST

Updated : Jul 27, 2019, 10:34 AM IST

ETV Bharat / bharat

20ನೇ ಕಾರ್ಗಿಲ್​ ವಿಜಯ್​ ದಿವಸ್​ ಮರುದಿನವೇ ಇಬ್ಬರು ಉಗ್ರರ ಹತ್ಯೆ

ದಕ್ಷಿಣ ಕಾಶ್ಮೀರ ಭಾಗದ ಶೋಪಿಯಾನ್​ ಜಿಲ್ಲೆಯ ಬೊನ್‌ಬಜಾರ್ ಪ್ರದೇಶದಲ್ಲಿ ಉಗ್ರರು ಇರುವ ಬಗ್ಗೆ ಖಚಿತ ಮಾಹಿತಿ ಪಡೆದ ಭದ್ರತಾ ಪಡೆಯ ಯೋಧರ ಶೋಧ ಕಾರ್ಯಾಚರಣೆ ಆರಂಭಿಸಿದರು. ಈ ವೇಳೆ ಉಗ್ರರು ಭದ್ರತಾ ಪಡೆಯತ್ತ ಗುಂಡಿನ ದಾಳಿ ನಡೆಸಿದರು.

ಭದ್ರತಾ ಪಡೆ

ಶೋಪಿಯಾನ್:ಐತಿಹಾಸಿಕ ಕಾರ್ಗಿಲ್​ ವಿಜಯ್​ ದಿವಸ್​ನ 20ನೇ ವರ್ಷಾಚರಣೆಯೆ ಮರುದಿನವೇ ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್​ ಜಿಲ್ಲೆಯಲ್ಲಿ ಶನಿವಾರ ಬೆಳಗ್ಗೆ ಸಂಭವಿಸಿದ ಭದ್ರತಾ ಪಡೆ ಮತ್ತು ಉಗ್ರರ ನಡುವಿನ ಗುಂಡಿನ ಕಾಳಗದಲ್ಲಿ ಇಬ್ಬರು ಹತರಾಗಿದ್ದಾರೆ.

ದಕ್ಷಿಣ ಕಾಶ್ಮೀರ ಭಾಗದ ಶೋಪಿಯಾನ್​ ಜಿಲ್ಲೆಯ ಬೊನ್‌ಬಜಾರ್ ಪ್ರದೇಶದಲ್ಲಿ ಉಗ್ರರು ಇರುವ ಬಗ್ಗೆ ಖಚಿತ ಮಾಹಿತಿ ಪಡೆದ ಭದ್ರತಾ ಪಡೆಯ ಯೋಧರ ಶೋಧ ಕಾರ್ಯಾಚರಣೆ ಆರಂಭಿಸಿದರು. ಈ ವೇಳೆ ಉಗ್ರರು ಭದ್ರತಾ ಪಡೆಯತ್ತ ಗುಂಡಿನ ದಾಳಿ ನಡೆಸಿದರು.

ಉಗ್ರರು ಗುಂಡು ಹಾರಿಸಿದ ನಂತರ ಶೋಧ ಕಾರ್ಯಾಚರಣೆ ಎನ್‌ಕೌಂಟರ್‌ ಆಗಿ ಮಾರ್ಪಟ್ಟಿದೆ. ಪ್ರತಿ ದಾಳಿ ನಡೆಸಿದ ಭದ್ರತಾ ಪಡೆಯ ಯೋಧರು ಇಬ್ಬರು ಉಗ್ರರನ್ನು ಹತ್ಯೆ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ. ಈ ವೇಳೆ ಭದ್ರತಾ ಪಡೆಯ ಓರ್ವ ಯೋಧ ಮೃತಪಟ್ಟಿದ್ದಾನೆ. ಎರಡೂ ಕಡೆಗಳಿಂದ ಗುಂಡಿನ ಚಕಮಕಿ ಮುಂದುವರಿದಿದ್ದು, ಇನ್ನಷ್ಟು ಮಾಹಿತಿಗಾಗಿ ಎದುರು ನೋಡಲಾಗುತ್ತಿದೆ.

Last Updated : Jul 27, 2019, 10:34 AM IST

For All Latest Updates

TAGGED:

ABOUT THE AUTHOR

...view details