ಕರ್ನಾಟಕ

karnataka

By

Published : Mar 25, 2019, 5:07 PM IST

ETV Bharat / bharat

ಕಮಲ್ ಮೀಟ್ಸ್​​ ಮಮತಾ ಬ್ಯಾನರ್ಜಿ​​... ಅಂಡಮಾನ್​​ನಲ್ಲಿ ಎಂಎನ್​ಎಂ, ಟಿಎಂಸಿ ಮೈತ್ರಿ ಎಂದ ಕಮಲ್​​

ಮಕ್ಕಳ್ ನೀದಿ ಮಯ್ಯಮ್ ಪಕ್ಷವನ್ನು ಸ್ಥಾಪಿಸಿರುವ ಕಮಲ್​​, ಈಗಾಗಲೇ ತಮಿಳುನಾಡು ಹಾಗೂ ಪುದುಚೇರಿ ಕ್ಷೇತ್ರಗಳಲ್ಲಿನ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ್ದಾರೆ.

ಕಮಲ್ ಹಾಸನ್

ಹೌರಾ:ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧೆ ಮಾಡಲ್ಲ ಎಂದು ಹೇಳಿದ ಮರುದಿನವೇ ನಟ ಹಾಗೂ ಮಕ್ಕಳ್ ನೀದಿ ಮಯ್ಯಮ್ ಪಕ್ಷದ ಸಂಸ್ಥಾಪಕ ಕಮಲ್ ಹಾಸನ್ ಪಶ್ಚಿಮ ಬಂಗಾಳ ಮುಖ್ಯಮಂತ್ರಿ, ಟಿಎಂಸಿ ಮುಖ್ಯಸ್ಥೆ ಮಮತಾ ಬ್ಯಾನರ್ಜಿಯನ್ನು ಭೇಟಿ ಮಾಡಿದ್ದಾರೆ.

ಮಕ್ಕಳ್ ನೀದಿ ಮಯ್ಯಮ್ ಪಕ್ಷವನ್ನು ಸ್ಥಾಪಿಸಿರುವ ಕಮಲ್​​, ಈಗಾಗಲೇ ತಮಿಳುನಾಡು ಹಾಗೂ ಪುದುಚೇರಿ ಕ್ಷೇತ್ರಗಳಲ್ಲಿನ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ್ದಾರೆ.

ಕಮಲ್​​ ಹಾಸನ್, ಟಿಎಂಸಿ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಹಾಗೂ ಪಕ್ಷದ ಹಿರಿಯ ನಾಯಕರನ್ನು ಹೌರಾದಲ್ಲಿನ ನಬನ್ನದಲ್ಲಿ ಭೇಟಿ ಮಾಡಿ ಕೆಲ ಕಾಲ ಮಾತುಕತೆ ನಡೆಸಿದ್ದಾರೆ.

ಅಂಡಮಾನ್​​ನಲ್ಲಿ ಟಿಎಂಸಿ ಹಾಗೂ ಮಕ್ಕಳ್ ನೀದಿ ಮೈಯ್ಯಮ್​​ ಮೈತ್ರಿಯಾಗಿದ್ದು, ಅಲ್ಲಿ ಟಿಎಂಸಿ ಅಭ್ಯರ್ಥಿ ಪರ ನಮ್ಮ ಪಕ್ಷ ಪ್ರಚಾರ ನಡೆಸಲಿದೆ ಎಂದು ಭೇಟಿ ಬಳಿಕ ಕಮಲ್ ಹೇಳಿಕೆ ನೀಡಿದ್ದಾರೆ.

ABOUT THE AUTHOR

...view details