ಕಾನ್ಫುರ್ (ಯುಪಿ): ಉತ್ತರಪ್ರದೇಶದ ಕಾನ್ಪುರದಲ್ಲಿ ದುಷ್ಕರ್ಮಿಗಳ ಗುಂಡಿನ ದಾಳಿಯಿಂದ 8 ಪೊಲೀಸರು ಹುತಾತ್ಮರಾಗಿರುವ ಘಟನೆ ನಡೆದಿದ್ದು, ಇದೀಗ ಅವರಿಗೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಗೌರವಾರ್ಥ ಪರಿಹಾರ ಘೋಷಣೆ ಮಾಡಿದ್ದಾರೆ.
ರೌಡಿಶೀಟರ್ವೋರ್ವನ ಬಂಧನ ಮಾಡಲು ತೆರಳಿದ್ದ ವೇಳೆ ಉಪ ಪೊಲೀಸ್ ವರಿಷ್ಠಾಧಿಕಾರಿ, ಮೂವರು ಸಬ್ ಇನ್ಸ್ಪೆಕ್ಟರ್ಗಳು ಸೇರಿದಂತೆ ಎಂಟು ಮಂದಿ ಪೊಲೀಸರು ಕ್ರಿಮಿನಲ್ಗಳ ಗುಂಡಿಗೆ ಬಲಿಯಾಗಿದ್ದರು. ಜತೆಗೆ ಏಳು ಮಂದಿ ಪೊಲೀಸರು ತೀವ್ರವಾಗಿ ಗಾಯಗೊಂಡಿದ್ದಾರೆ.
ಯೋಗಿ ಆದಿತ್ಯನಾಥ್ ಸುದ್ದಿಗೋಷ್ಠಿ ಹುತಾತ್ಮ ಯೋಧರ ಅಂತ್ಯಕ್ರಿಯೆಯಲ್ಲಿ ಭಾಗಿಯಾದ ಯೋಗಿ ಆದಿತ್ಯನಾಥ್ ಗೌರವ ಸಲ್ಲಿಕೆ ಮಾಡಿದರು. ಇದಾದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಮ್ಮ ಪೊಲೀಸರ ತ್ಯಾಗ ಯಾವುದೇ ಕಾರಣಕ್ಕೂ ವ್ಯರ್ಥವಾಗಲು ಬಿಡುವುದಿಲ್ಲ. ಜನರೇ ಇದಕ್ಕೆ ಕಾರಣ ಎಂದಿರುವ ಅವರು, ಸರ್ಕಾರ ಪ್ರತಿ ಕುಟುಂಬಕ್ಕೂ 1 ಕೋಟಿ ರೂ. ಪರಿಹಾರ, ಪಿಂಚಣಿ ಹಾಗೂ ಒಬ್ಬರಿಗೆ ಸರ್ಕಾರ ಕೆಲಸ ನೀಡುವುದಾಗಿ ಘೋಷಣೆ ಮಾಡಿದ್ದಾರೆ.
ಹುತಾತ್ಮ ಪೊಲೀಸರಿಗೆ ಯೋಗಿ ನಮನ ಎನ್ಕೌಂಟರ್ನಲ್ಲಿ ಪೊಲೀಸ್ ವರಿಷ್ಠಾಧಿಕಾರಿ ದೇವೇಂದ್ರ ಕುಮಾರ್ ಮಿಶ್ರಾ, ಸಬ್ ಇನ್ಸ್ಪೆಕ್ಟರ್ ಮಹೇಶ್ ಯಾದವ್, ಅನೂಪ್ ಕುಮಾರ್ಮತ್ತು ನೆಬುಲಾಲ್ ಹಾಗೂ ಪೇದೆಗಳಾದ ಸುಲ್ತಾನ್ ಸಿಂಗ್, ರಾಹುಲ್ ಜಿತೇಂದ್ರ, ಮತ್ತು ಬಬ್ಲು ಹುತಾತ್ಮರಾಗಿದ್ದಾರೆ ಎಂದು ಅವರು ತಿಳಿಸಿದರು.