ಕರ್ನಾಟಕ

karnataka

ETV Bharat / bharat

20ನೇ ಕಾರ್ಗಿಲ್​ ವಿಜಯೋತ್ಸವ.. ದೆಹಲಿಯಿಂದ ಹೊರಟ ವಿಕ್ಟರಿ ಜ್ಯೋತಿ.. -

ದೆಹಲಿಯ ರಾಷ್ಟ್ರೀಯ ಯುದ್ಧ ಸ್ಮಾರಕದಲ್ಲಿ ಕಾರ್ಗಿಲ್​ ಜ್ಯೋತಿ ಯಾತ್ರೆಗೆ ಚಾಲನೆ ನೀಡಿದ್ದು, ದೇಶದ ಪ್ರಮುಖ​ ನಗರಳಲ್ಲಿ ಇದು ಸಂಚರಿಸಲಿದೆ. 1999ರಲ್ಲಿ ಪಾಕಿಸ್ತಾನದ ವಿರುದ್ಧ ಕಾರ್ಗಿಲ್ ಯುದ್ಧದಲ್ಲಿ ಐತಿಹಾಸಿಕ ಗೆಲುವು ಸಾಧಿಸಿರುವ ಸ್ಮರಣಾರ್ಥವಾಗಿ ದೇಶದಾದ್ಯಂತ ಜುಲೈ 26ರಂದು ಕಾರ್ಗಿಲ್ ವಿಜಯೋತ್ಸವ ದಿನವನ್ನು ಆಚರಿಸಲಾಗುತ್ತಿದೆ. ಅಂದು ಈ ಯಾತ್ರೆ ಸಮಾಪ್ತಿಗೊಳ್ಳಲಿದೆ.

ಕಾರ್ಗಿಲ್ ವಿಜಯೋತ್ಸವ

By

Published : Jul 14, 2019, 11:04 PM IST

ನವದೆಹಲಿ:ಪಾಕಿಸ್ತಾನದ ವಿರುದ್ಧ ಕಾರ್ಗಿಲ್ ಯುದ್ಧದಲ್ಲಿ ಐತಿಹಾಸಿಕ ಗೆಲವು ಸಾಧಿಸಿರುವ ಸ್ಮರಣಾರ್ಥ ಆಚರಿಸಲಾಗುವ 20ನೇ ಕಾರ್ಗಿಲ್​ ವಿಜಯೋತ್ಸವ'ದ ಪ್ರಯುಕ್ತ ವಿಕ್ಟರಿ ಜ್ಯೋತಿ ಯಾತ್ರೆಗೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಚಾಲನೆ ನೀಡಿದರು.

ದೆಹಲಿಯ ರಾಷ್ಟ್ರೀಯ ಯುದ್ಧ ಸ್ಮಾರಕದಲ್ಲಿ ಕಾರ್ಗಿಲ್​ ಜ್ಯೋತಿ ಯಾತ್ರೆಗೆ ಚಾಲನೆ ನೀಡಿದ್ದು, ದೇಶದ ಪ್ರಮುಖ​ ನಗರಗಳಲ್ಲಿ ಇದು ಸಂಚರಿಸಲಿದೆ. 1999ರಲ್ಲಿ ಪಾಕಿಸ್ತಾನದ ವಿರುದ್ಧ ಕಾರ್ಗಿಲ್ ಯುದ್ಧದಲ್ಲಿ ಭಾರತ ಐತಿಹಾಸಿಕ ಗೆಲವು ಸಾಧಿಸಿರುವ ಸ್ಮರಣಾರ್ಥವಾಗಿ ದೇಶದಾದ್ಯಂತ ಜುಲೈ 26ರಂದು ಕಾರ್ಗಿಲ್ ವಿಜಯೋತ್ಸವ ದಿನವನ್ನು ಆಚರಿಸಲಾಗುತ್ತಿದೆ. ಅಂದು ಈ ಯಾತ್ರೆ ಸಮಾಪ್ತಿಗೊಳ್ಳಲಿದೆ.

ಈ ವೇಳೆ ಮಾತನಾಡಿದ ರಾಜನಾಥ್ ಸಿಂಗ್​ ಅವರು, ದೇಶಕ್ಕೆ ತಮ್ಮ ಪ್ರಾಣ ಅರ್ಪಿಸಿದ ಸೈನಿಕರನ್ನು ಹೃದಯಪೂರ್ವಕವಾಗಿ ಸ್ಮರಿಸುತ್ತೇನೆ. ಕಾರ್ಗಿಲ್ ಯುದ್ಧದಲ್ಲಿ ಹುತಾತ್ಮರಾದ ಯೋಧರ ಕುಟುಂಬಸ್ಥರ ತ್ಯಾಗ ಮನೋಭಾವನೆ ನಮನ ಸಲ್ಲಿಸುತ್ತೇನೆ ಎಂದು ಹೇಳಿದರು.

For All Latest Updates

TAGGED:

ABOUT THE AUTHOR

...view details