ನವದೆಹಲಿ:ಭಾರಿ ಕುತೂಹಲ ಮೂಡಿಸಿರುವ 17 ಮಂದಿ ಅನರ್ಹ ಶಾಸಕರ ಅರ್ಜಿ ವಿಚಾರಣೆ ಅಂತಿಮ ಹಂತ ತಲುಪಿದ್ದು ಇಂದು ಬೆಳಗ್ಗೆ 10.30ಕ್ಕೆ ಸುಪ್ರೀಂಕೋರ್ಟ್ ತೀರ್ಪು ನೀಡಲಿದೆ.
ಶಾಸಕರ ರಾಜೀನಾಮೆಯಿಂದ ತೆರವಾದ 17 ಕ್ಷೇತ್ರಗಳ ಪೈಕಿ 15 ವಿಧಾನಸಭಾ ಕ್ಷೇತ್ರಗಳಿಗೆ ಡಿಸೆಂಬರ್ 5ರಂದು ಎಲೆಕ್ಷನ್ ನಡೆಯಲಿದೆ. ಈ ಉಪಚುನಾವಣೆಯಲ್ಲಿ ಅನರ್ಹರು ಸ್ಪರ್ಧಿಸುವ ಬಗ್ಗೆ ಸುಪ್ರೀಂಕೋರ್ಟ್ ನಿರ್ಧರಿಸಲಿದೆ.
ಜೆಡಿಎಸ್- ಕಾಂಗ್ರೆಸ್ ಮೈತ್ರಿ ಸರ್ಕಾರದ ವಿರುದ್ಧ ತಿರುಗಿ ಬಿದ್ದು ಸರ್ಕಾರದ ಪತನಕ್ಕೆ ಕಾರಣವಾದ ಕಾಂಗ್ರೆಸ್ನ 13, ಜೆಡಿಎಸ್ನ 3 ಹಾಗೂ ಓರ್ವ ಪಕ್ಷೇತರ ಶಾಸಕರನ್ನು ಈ ಹಿಂದಿನ ವಿಧಾನಸಭೆಯ ಸ್ಪೀಕರ್ ಕೆ. ಆರ್. ರಮೇಶ್ಕುಮಾರ್ ಶಾಸಕ ಸ್ಥಾನದಿಂದ ಅನರ್ಹಗೊಳಿಸಿದ್ದರು. ಹೀಗಾಗಿ ಈ ಶಾಸಕರು ಪ್ರಸಕ್ತ ವಿಧಾನಸಭೆ ಅವಧಿ ಮುಕ್ತಾಯ ಆಗುವವರೆಗೂ (2023) ಚುನಾವಣೆಯಲ್ಲಿ ಸ್ಪರ್ಧಿಸುವ ಹಾಗಿಲ್ಲ.