ನವದೆಹಲಿ: ಕೃಷಿಗೆ ಸಂಬಂಧಿಸಿದಂತೆ ಸಂಸತ್ನಲ್ಲಿ ಮಂಡನೆಯಾಗಿರುವ ಮೂರು ಮಸೂದೆಗಳು 'ರೈತ ವಿರೋಧಿ'ಯಾಗಿದ್ದು, ಈ ಮಸೂದೆಗಳ ವಿರುದ್ಧ ಆಮ್ ಆದ್ಮಿ ಪಕ್ಷ ( ಎಎಪಿ) ಮತ ಚಲಾಯಿಸಲಿದೆ ಎಂದು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, ಕೇಂದ್ರದ ಕೃಷಿಗೆ ಸಂಬಂಧಿತ ಮೂರು ಮಸೂದೆಗಳು ರೈತ ವಿರೋಧಿಯಾಗಿವೆ. ದೇಶದಾದ್ಯಂತ ರೈತರು ಅದನ್ನು ವಿರೋಧಿಸಿದ್ದಾರೆ. ಆದ್ದರಿಂದ ಕೇಂದ್ರ ಸರ್ಕಾರ ಮಸೂದೆಗಳನ್ನು ಹಿಂತೆಗೆದುಕೊಳ್ಳಬೇಕು ಎಂದು ಬರೆದುಕೊಂಡಿದ್ದಾರೆ. ಆಮ್ ಆದ್ಮಿ ಪಕ್ಷದಲ್ಲಿ ಮೂವರು ರಾಜ್ಯಸಭಾ ಮತ್ತು ಒಬ್ಬ ಲೋಕಸಭಾ ಸದಸ್ಯರಿದ್ದಾರೆ.