ಕರ್ನಾಟಕ

karnataka

ವೈದ್ಯರಿಂದ ಪ್ರಿಸ್ಕ್ರಿಪ್ಷನ್ ತಂದವರಿಗೆ ಮದ್ಯ... ಕೇರಳ ಸರ್ಕಾರ ನಿರ್ಧಾರಕ್ಕೆ ಕೋರ್ಟ್​​ ತಡೆ

ರಾಜ್ಯದಲ್ಲಿ ವೈದ್ಯರ ಬಳಿ ಔಷಧಿ ಚೀಟಿ ತೆಗೆದುಕೊಂಡು ಬಂದರೆ ಮದ್ಯ ನೀಡುವ ನಿರ್ಧಾರ ಕೈಗೊಂಡಿದ್ದ ಕೇರಳ ಸರ್ಕಾರದ ನಿರ್ಧಾರಕ್ಕೆ ಇದೀಗ ಹಿನ್ನಡೆಯಾಗಿದೆ.

By

Published : Apr 2, 2020, 2:19 PM IST

Published : Apr 2, 2020, 2:19 PM IST

Updated : Apr 2, 2020, 2:56 PM IST

Kerala HC stays govt order
Kerala HC stays govt order

ನವದೆಹಲಿ:ಕೊರೊನಾ ವೈರಸ್​ ಹಿನ್ನೆಲೆಯಲ್ಲಿ ದೇಶಾದ್ಯಂತ ಲಾಕ್​ಡೌನ್​ ಜಾರಿಯಲ್ಲಿರುವುದರಿಂದ ಮದ್ಯದಂಗಡಿ ಬಂದ್​ ಆಗಿ ಎಣ್ಣೆ ಪ್ರಿಯರು ತೊಂದರೆ ಅನುಭವಿಸುವಂತಾಗಿದೆ.

ಇದರ ಮಧ್ಯೆ ಮದ್ಯ ಲಭಿಸದೇ ಖಿನ್ನತೆಗೊಳಗಾಗಿ ಸಾವನ್ನಪ್ಪುತ್ತಿರುವವರ ಸಂಖ್ಯೆ ಕೇರಳದಲ್ಲಿ ಹೆಚ್ಚಾಗಿದ್ದರಿಂದ ವೈದ್ಯರ ಚೀಟಿ ಇದ್ದರೆ, ಅವರ ಮನೆ ಬಾಗಿಲಿಗೆ ಮದ್ಯ ಪೂರೈಕೆ ಮಾಡುವ ನಿರ್ಧಾರ ಅಲ್ಲಿನ ಸರ್ಕಾರ ಕೈಗೊಂಡಿತ್ತು. ಕೇರಳ ಸರ್ಕಾರದ ಈ ನಿರ್ಧಾರಕ್ಕೆ ಭಾರತೀಯ ವೈದ್ಯಕೀಯ ಸಂಘ ಟೀಕೆ ವ್ಯಕ್ತಪಡಿಸಿತ್ತು. ಜೊತೆಗೆ ಕೇರಳ ಸಿಎಂ ಅವರೊಂದಿಗೆ ಮಾತನಾಡುವುದಾಗಿ ಹೇಳಿತ್ತು.

ಇದೀಗ ಮದ್ಯ ಪೂರೈಕೆ ವಿಚಾರವನ್ನಿಟ್ಟುಕೊಂಡು ಮುಖ್ಯಮಂತ್ರಿ ಪಿಣರಾಯಿ ವಿಜಯನ್​ ಸರ್ಕಾರದ ನಿರ್ಧಾರಕ್ಕೆ ಕೇರಳ ಹೈಕೋರ್ಟ್​ ತಡೆ ನೀಡಿದೆ. ಕೇರಳ ಸರ್ಕಾರದ ಈ ನಿರ್ಧಾರ ಪ್ರಶ್ನಿಸಿ ಶಾಸಕ ಟಿ.ಎನ್. ಪ್ರತಾಪನ್​ ಕೋರ್ಟ್ ಮೆಟ್ಟಿಲೇರಿದ್ದರು. ಕೇರಳ ಸರ್ಕಾರದ ನಿರ್ಧಾರಕ್ಕೆ ತಡೆ ನೀಡಿದ ಬಳಿಕ ಹೈಕೋರ್ಟ್​ ವಿಚಾರಣೆಯನ್ನು ಮೂರು ವಾರ ಮುಂದೂಡಿದೆ.

Last Updated : Apr 2, 2020, 2:56 PM IST

ABOUT THE AUTHOR

...view details