ನವದೆಹಲಿ :ಒಂದು ಕಾಲದಲ್ಲಿ ನಿತೀಶ್ ಕುಮಾರ್ ಅವರ ಆಪ್ತರಾಗಿ ಗುರುತಿಸಿಕೊಂಡಿದ್ದ ಪೋಲ್ ಸ್ಟ್ರಾಟಜಿಸ್ಟ್ ಪ್ರಶಾಂತ್ ಕಿಶೋರ್ ಈಗ ಸ್ವತಃ ಬಿಹಾರ್ ಸಿಎಂ ವಿರುದ್ಧವೇ ಚಾಟಿ ಬೀಸಿದ್ದಾರೆ. ನಿತೀಶ್ಕುಮಾರ್ ರಾಜೀನಾಮೆ ನೀಡಬೇಕು ಎಂದು ಟ್ವೀಟ್ ಮುಖಾಂತರ ಒತ್ತಾಯಿಸಿದ್ದಾರೆ. ಕೊರೊನಾ ಸೋಂಕಿನಿಂದ ಜನರನ್ನು ರಕ್ಷಿಸಲು ಸರ್ಕಾರ ತೆಗೆದುಕೊಂಡಿರುವ ಕ್ರಮಗಳನ್ನು ನೋಡಿದ್ರೆ ಭಯಾನಕವಾಗಿದೆ. ಸರ್ಕಾರದ ನಿರ್ಧಾರಗಳಿಂದ ಜನರು ಭಾರೀ ತೊಂದರೆಗಳನ್ನು ಎದುರಿಸುತ್ತಿದ್ದಾರೆ.
ಬೇರೆ ರಾಜ್ಯಗಳಿಂದ ಬಿಹಾರಕ್ಕೆ ಬಂದ ಜನರನ್ನು ಒಂದು ರೂಮಿನಲ್ಲಿ ಕ್ವಾರಂಟೈನ್ ಎಂದು ಹೇಳಿ ಇಟ್ಟಿದ್ದಾರೆ. ಅಲ್ಲಿ ಅವರ ಪರಿಸ್ಥಿತಿ ತುಂಬಾ ಭಯಾನಕವಾಗಿದೆ. ಅಲ್ಲಿರುವ ಜನ ನಮ್ಮನ್ನು ಹೊರಗೆ ಬಿಡಿ ಎಂದು ಅಂಗಲಾಚುತ್ತಿದ್ದಾರೆ. ಇದು ನಿತೀಶ್ಕುಮಾರ್ ಅವರ ಕಣ್ಣಿಗೆ ಕಾಣುತ್ತಿಲ್ಲವೇ.. ಆ ಬಡವರ ಕೂಗು ನಿಮಗೆ ಕೇಳಿಸುತ್ತಿಲ್ಲವೇ.. ಎಂದು ತಮ್ಮ ಟ್ವೀಟ್ನಲ್ಲಿ ವಿಡಿಯೋವೊಂದನ್ನ ಹಾಕಿ ರಾಜೀನಾಮೆಗೆ ಆಗ್ರಹಿಸಿದ್ದಾರೆ.