ಕರ್ನಾಟಕ

karnataka

ETV Bharat / bharat

ವಿಶಾಖಪಟ್ಟಣಂ ದುರಂತ: ಗೃಹ, ರಕ್ಷಣಾ ಸಚಿವರು ಸೇರಿದಂತೆ ಪ್ರಮುಖರೊಂದಿಗೆ ಮೋದಿ ಸಭೆ

ವೈಜಾಗ್​​ನಲ್ಲಿ ನಡೆದಿರುವ ವಿಷಾನಿಲ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಮಹತ್ವದ ಸಭೆ ನಡೆಸಿದರು.

By

Published : May 7, 2020, 12:48 PM IST

PM chairs NDMA meet
PM chairs NDMA meet

ನವದೆಹಲಿ:ವಿಶಾಖಪಟ್ಟಣಂದಲ್ಲಿ ನಡೆದಿರುವ ಅನಿಲ ದುರಂತ ಇಡೀ ದೇಶವೇ ಬೆಚ್ಚಿ ಬೀಳುವಂತೆ ಮಾಡಿದೆ. ಘಟನೆಯ ತೀವ್ರತೆ ಹೆಚ್ಚಾಗಿರುವ ಕಾರಣ ಪ್ರಧಾನಿ ನರೇಂದ್ರ ಮೋದಿ ಮಹತ್ವದ ತುರ್ತು ಸಭೆ ನಡೆಸಿದರು. ಸಭೆಯಲ್ಲಿ ಗೃಹ ಸಚಿವ ಅಮಿತ್​ ಶಾ, ರಕ್ಷಣಾ ಸಚಿವ ರಾಜನಾಥ್​ ಸಿಂಗ್​ ಸೇರಿದಂತೆ ರಾಷ್ಟ್ರೀಯ ವಿಪತ್ತು ನಿರ್ವಹಣಾ ಅಧಿಕಾರಿಗಳು ಪಾಲ್ಗೊಂಡಿದ್ದರು.

ವೈಜಾಗ್​ ಅನಿಲ ಸ್ಫೋಟ; ಮೋದಿ ಮಹತ್ವದ ಸಭೆ

ಮುಂದಿನ ಕ್ರಮಗಳು, ಕಾರ್ಖಾನೆ ಸುತ್ತಮುತ್ತಲಿನ ಜನರಿಗೆ ಸೌಲಭ್ಯ, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿರುವವರ ಆರೈಕೆಗೆ ಬೇಕಾದ ಕ್ರಮಗಳ ಬಗ್ಗೆ ಚರ್ಚೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ. ಸಭೆ ನಡೆಸುವುದಕ್ಕೂ ಮುಂಚಿತವಾಗಿ ಆಂಧ್ರಪ್ರದೇಶ ಮುಖ್ಯಮಂತ್ರಿ ಜಗನ್​​ಮೋಹನ್​ ರೆಡ್ಡಿ ಜತೆ ಮಾತನಾಡಿರುವ ಮೋದಿ, ಎಲ್ಲ ರೀತಿಯ ಅಗತ್ಯ ಸಹಕಾರ ನೀಡುವುದಾಗಿ ಭರವಸೆ ನೀಡಿದ್ದಾರೆ.

ಘಟನೆಯಲ್ಲಿ ಈಗಾಗಲೇ 9 ಮಂದಿ ಸಾವನ್ನಪ್ಪಿದ್ದು, 300 ಜನರ ಸ್ಥಿತಿ ಗಂಭೀರವಾಗಿದೆ. ಉಳಿದಂತೆ 5 ಸಾವಿರಕ್ಕೂ ಅಧಿಕ ಜನರು ಅನಾರೋಗ್ಯದಿಂದ ಬಳಲುತ್ತಿದ್ದಾರೆ ಎಂದು ತಿಳಿದು ಬಂದಿದೆ.

ABOUT THE AUTHOR

...view details