ಕರ್ನಾಟಕ

karnataka

ETV Bharat / bharat

ಮತ ಎಣಿಕೆ :ಕಾನೂನು-ಸುವ್ಯವಸ್ಥೆ ಪಾಲಿಸಲು ಗೃಹ ಇಲಾಖೆ ಸೂಚನೆ - undefined

ಫಲಿತಾಂಶದ ವೇಳೆ ಹಿಂಸಾಚಾರ ನಡೆಯಬಹುದಾದ್ದರಿಂದ ಮುನ್ನೆಚ್ಚರಿಕೆ ವಹಿಸಬೇಕೆಂದು ಎಲ್ಲ ರಾಜ್ಯಗಳ ಮುಖ್ಯ ಕಾರ್ಯದರ್ಶಿಗಳು ಹಾಗೂ ಪೊಲೀಸ್​ ಮಹಾನಿರ್ದೇಶಕರಿಗೆ ಗೃಹ ಇಲಾಖೆ ಸೂಚನೆ ನೀಡಿದೆ.

ಗೃಹ ಇಲಾಖೆ

By

Published : May 23, 2019, 3:18 AM IST

ನವದೆಹಲಿ:ಇಂದು ಲೋಕಸಭೆ ಚುನಾವಣೆ ಮತ ಎಣಿಕೆ ಪ್ರಕ್ರಿಯೆ ನಡೆಯುವುದರಿಂದ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ವಹಿಸಲು ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ಕೇಂದ್ರ ಗೃಹ ಇಲಾಖೆ ಸೂಚನೆ ನೀಡಿದೆ.

ಫಲಿತಾಂಶದ ವೇಳೆ ಹಿಂಸಾಚಾರ ನಡೆಯಬಹುದಾದ್ದರಿಂದ ಮುನ್ನೆಚ್ಚರಿಕೆ ವಹಿಸಬೇಕೆಂದು ಎಲ್ಲ ರಾಜ್ಯಗಳ ಮುಖ್ಯ ಕಾರ್ಯದರ್ಶಿಗಳು ಹಾಗೂ ಪೊಲೀಸ್​ ಮಹಾನಿರ್ದೇಶಕರಿಗೆ ಗೃಹ ಇಲಾಖೆ ಸೂಚನೆ ನೀಡಿದೆ.

ಎಲ್ಲೆಡೆ ಕಾನೂನು ಹಾಗೂ ಸುವ್ಯವಸ್ಥೆ ಕಾಪಾಡಬೇಕು ಎಂದಿರುವ ಇಲಾಖೆ, ಸಂಭವನೀಯ ಗಲಭೆಗಳನ್ನು ತಡೆಯಲು ಕ್ರಮ ಕೈಗೊಳ್ಳುವಂತೆ ಎಚ್ಚರಿಕೆಯ ಸಂದೇಶ ನೀಡಿದೆ.

ಉತ್ತರಪ್ರದೇಶ, ಪಶ್ಚಿಮ ಬಂಗಾಳ, ಬಿಹಾರ ಹಾಗೂ ತ್ರಿಪುರಗಳಲ್ಲಿ ಕೆಲ ಸಂಸ್ಥೆಗಳು ಫಲಿತಾಂಶದ ವೇಳೆ ಹಿಂಸಾಚಾರ ನಡೆಸುವ, ಮತ ಎಣಿಕೆಗೆ ಅಡ್ಡಿಯುಂಟು ಮಾಡುವ ಹೇಳಿಕೆಗಳನ್ನು ನೀಡಿರುವ ಬೆನ್ನಲ್ಲೆ ಈ ಆದೇಶ ಹೊರಬಿದ್ದಿದೆ.

For All Latest Updates

TAGGED:

ABOUT THE AUTHOR

...view details