ಕರ್ನಾಟಕ

karnataka

By

Published : Nov 25, 2019, 12:10 PM IST

ETV Bharat / bharat

ಪ್ರಜಾಪ್ರಭುತ್ವದ ಕಗ್ಗೊಲೆ ನಿಲ್ಲಿಸಿ: 'ಮಹಾ' ಸರ್ಕಾರದ ವಿರುದ್ಧ ದೆಹಲಿಯಲ್ಲಿ ಕಾಂಗ್ರೆಸ್ ಪ್ರತಿಭಟನೆ

ಮಹಾರಾಷ್ಟ್ರ ಸರ್ಕಾರ ರಚನೆ ವಿಚಾರದ ವಿರುದ್ಧ ದೆಹಲಿ ಸಂಸತ್ತಿನ ಆವರಣದ ಬಳಿ ಪ್ರಜಾಪ್ರಭುತ್ವದ ಹತ್ಯೆ ನಿಲ್ಲಿಸಿ ಎಂದು ಕಾಂಗ್ರೆಸ್​ನ ಮಧ್ಯಂತರ ಅಧ್ಯಕ್ಷೆ ಸೋನಿಯಾ ಗಾಂಧಿ ನೇತೃತ್ವದಲ್ಲಿ ಪ್ರತಿಭಟನೆ ನಡೆಯುತ್ತಿದೆ.

ಕಾಂಗ್ರೆಸ್ ಪ್ರತಿಭಟನೆ

ದೆಹಲಿ:ರಾಷ್ಟ್ರೀಯ ಕಾಂಗ್ರೆಸ್​ನ ಮಧ್ಯಂತರ ಅಧ್ಯಕ್ಷೆ ಸೋನಿಯಾ ಗಾಂಧಿ ನೇತೃತ್ವದಲ್ಲಿ ಮಹಾರಾಷ್ಟ್ರ ಸರ್ಕಾರ ರಚನೆ ವಿಚಾರದ ವಿರುದ್ಧ ದೆಹಲಿ ಸಂಸತ್ತಿನ ಆವರಣದ ಬಳಿ ಪ್ರತಿಭಟನೆ ನಡೆಯಿತು.

ನ.26 ರ ವರೆಗೂ ಮಹಾರಾಷ್ಟ್ರದಲ್ಲಿ ಎನ್​ಸಿಪಿ-ಕಾಂಗ್ರೆಸ್​​-ಶಿವಸೇನಾ ಸೇರಿ ಮೈತ್ರಿ ಸರ್ಕಾರ ರಚನೆಯಾಗುತ್ತದೆಯೆಂಬ ಚಿತ್ರಣವೇ ನ.27 ರ ಶನಿವಾರ ಬೆಳಗಾಗುವಷ್ಟರಲ್ಲಿ ಬದಲಾಗಿ ಹೋಗಿತ್ತು. ಆಶ್ಚರ್ಯಕರ ರೀತಿಯಲ್ಲಿ ಶಾಸಕರ ಸಹಿ ಇಲ್ಲದೇ ಬಿಜೆಪಿ ನಾಯಕ ದೇವೇಂದ್ರ ಫಡ್ನವೀಸ್​​ ಮಹಾರಾಷ್ಟ್ರದ ಮುಖ್ಯಮಂತ್ರಿಯಾಗಿ ಹಾಗೂ ಎನ್​ಸಿಪಿ ನಾಯಕ ಅಜಿತ್​ ಪವಾರ್​ ಉಪಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದರು.

ಇದೀಗ ಇದರ ವಿರುದ್ಧ ಸೋನಿಯಾ ಗಾಂಧಿ ನೇತೃತ್ವದಲ್ಲಿ ಕಾಂಗ್ರೆಸ್​ ನಾಯಕರು ದೆಹಲಿಯಲ್ಲಿ ಪ್ರತಿಭಟಿಸುತ್ತಿದ್ದಾರೆ. ಪ್ರಜಾಪ್ರಭುತ್ವದ ಹತ್ಯೆಯಾಗುತ್ತಿದೆ, ಇದನ್ನು ನಿಲ್ಲಿಸಿ ಎಂದು ಆಕ್ರೋಶ ಹೊರಹಾಕಿದ್ದಾರೆ.

For All Latest Updates

ABOUT THE AUTHOR

...view details