ಕರ್ನಾಟಕ

karnataka

ETV Bharat / bharat

ಮುಂಬೈ ಡಬ್ಬಾವಾಲಗಳ ಅಭಿವೃದ್ಧಿಗೆ ಮುಂದಾದ ಸರ್ಕಾರ: ಮನೆ ನಿರ್ಮಿಸಿಕೊಡಲು ನಿರ್ಧಾರ - ಡಬ್ಬಾವಾಲಾಗಳಿಗೆ ಮನೆ ನಿರ್ಮಿಸಿಕೊಡಲು ಆದೇಶ

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿ ಅಜಿತ್ ಪವಾರ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಡಬ್ಬಾವಾಲಾಗಳಿಗೆ ಮನೆಗಳನ್ನು ನಿರ್ಮಿಸಿಕೊಡುವ ತೀರ್ಮಾನ ತೆಗೆದುಕೊಳ್ಳಲಾಗಿದೆ. ಅಲ್ಲದೆ, ಸರ್ಕಾರದಿಂದ ಡಬ್ಬಾವಾಲ ಭವನವನ್ನು ಕೂಡ ನಿರ್ಮಾಣ ಮಾಡಲಾಗುತ್ತದೆ ಎಂದು ಅಜಿತ್ ಪವಾರ್ ತಿಳಿಸಿದ್ದಾರೆ.

ಡಬ್ಬಾವಾಲಾಗಳಿಗೆ ಮನೆ ನಿರ್ಮಿಸಿಕೊಡಲು ಆದೇಶ
ಡಬ್ಬಾವಾಲಾಗಳಿಗೆ ಮನೆ ನಿರ್ಮಿಸಿಕೊಡಲು ಆದೇಶ

By

Published : Feb 14, 2020, 5:51 AM IST

ಮುಂಬೈ: ನಗರದ ಡಬ್ಬಾವಾಲರ ಸಂಘಟನೆ ಬಹಳ ಬಲವಾಗಿಯೂ, ಹಾಗೂ ಸುವ್ಯವಸ್ಥಿತವಾಗಿಯೂ ಇದೆ. ಈ ಹಿನ್ನೆಲೆ ಅವರ ಅಭಿವೃದ್ಧಿಗೆ ಸರ್ಕಾರ ಮುಂದಾಗಿದೆ. ಪ್ರದಾನ ಮಂತ್ರಿ ಆವಾಸ್ ಯೋಜನೆ ಅಡಿಯಲ್ಲಿ ಡಬ್ಬಾವಾಲಾಗಳಿಗೆ ಮನೆಗಳನ್ನು ನಿರ್ಮಿಸಲಿದೆ ಎಂದು ಮಹಾರಾಷ್ಟ್ರ ಸರ್ಕಾರ ತಿಳಿಸಿದೆ.

ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ಅಜಿತ್ ಪವಾರ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಅವರು ರಾಜ್ಯ ಇಲಾಖೆಗಳು ಮತ್ತು ಸಂಬಂಧಪಟ್ಟ ಅಧಿಕಾರಿಗಳಿಗೆ, ಡಬ್ಬಾವಾಲಾಗಳಿಗೆ ಮನೆಗಳನ್ನು ನಿರ್ಮಿಸಿಕೊಡುವಂತೆ ಆದೇಶಿಸಿದರು. ಅಲ್ಲದೆ, ಮುಂಬೈ ಡಬ್ಬವಾಲಾ ಭವನವನ್ನು ನಿರ್ಮಿಸಲು ಪವಾರ್ ಮುಂದಾಗಿದ್ದಾರೆ.

ಈ ಸಂಬಂಧ ಪ್ರತಿಕ್ರಿಯೆ ನೀಡಿರುವ ಮುಂಬೈ ಡಬ್ಬಾವಾಲ ಅಸೋಸಿಯೇಶನ್‌ನ ಮುಖ್ಯಸ್ಥ ಸುಭಾಷ್ ತಾಲೇಕರ್, ಇದು ಒಳ್ಳೆಯ ಸುದ್ದಿ. ಈ ನಿರ್ಧಾರ ತೆಗೆದುಕೊಂಡಿದ್ದಕ್ಕಾಗಿ ನಾವು ಅಜಿತ್ ದಾದಾ ಅವರಿಗೆ ಧನ್ಯವಾದ ಅರ್ಪಿಸುತ್ತೇವೆ ಎಂದಿದ್ದಾರೆ.

For All Latest Updates

ABOUT THE AUTHOR

...view details