ನವದೆಹಲಿ: ಮಧ್ಯಾಹ್ನ ಕೇಂದ್ರ ಚುನಾವಣಾ ಆಯೋಗ ಸುದ್ದಿಗೋಷ್ಠಿ ನಡೆಸಲಿದ್ದು, ಮಹಾರಾಷ್ಟ್ರ ಮತ್ತು ಹರಿಯಾಣ ರಾಜ್ಯಗಳ ವಿಧಾನಸಭೆ ಚುನಾವಣೆ ದಿನಾಂಕ ಘೋಷಣೆ ಮಾಡುವ ಸಾಧ್ಯತೆ ಇದೆ.
ಮಹಾರಾಷ್ಟ್ರ, ಹರಿಯಾಣ ವಿಧಾನಸಭೆ ಚುನಾವಣೆಗೆ ಮುಹೂರ್ತ ಫಿಕ್ಸ್.. ಮಧ್ಯಾಹ್ನ ಆಯೋಗದಿಂದ ಸುದ್ದಿಗೋಷ್ಠಿ - ಕೇಂದ್ರ ಚುನಾವಣಾ ಆಯೋಗ
ಕೇಂದ್ರ ಚುನಾವಣಾ ಆಯೋಗ ಇಂದು ಮಧ್ಯಾಹ್ನ ಸುದ್ದಿಗೋಷ್ಠಿ ನಡೆಸಲಿದ್ದು, ಮಹಾರಾಷ್ಟ್ರ ಮತ್ತು ಹರಿಯಾಣ ವಿಧಾನಸಭೆ ಚುನಾವಣೆ ದಿನಾಂಕ ಘೋಷಣೆ ಮಾಡುವ ಸಾಧ್ಯತೆ ಇದೆ.
![ಮಹಾರಾಷ್ಟ್ರ, ಹರಿಯಾಣ ವಿಧಾನಸಭೆ ಚುನಾವಣೆಗೆ ಮುಹೂರ್ತ ಫಿಕ್ಸ್.. ಮಧ್ಯಾಹ್ನ ಆಯೋಗದಿಂದ ಸುದ್ದಿಗೋಷ್ಠಿ](https://etvbharatimages.akamaized.net/etvbharat/prod-images/768-512-4506219-thumbnail-3x2-brm.jpg)
ಕೇಂದ್ರ ಚುನಾವಣಾ ಆಯೋಗ
ಜಾರ್ಖಂಡ್ನಲ್ಲೂ ವಿಧಾನಸಭೆ ಚುನಾವಣೆ ನಡೆಯಲಿದ್ದು, ಈ ಎರಡು ರಾಜ್ಯಗಳ ಜೊತೆಯಲ್ಲಿ ಚುನಾವಣೆ ದಿನಾಂಕ ಘೋಷಣೆ ಮಾಡಲಾಗುವುದಿಲ್ಲ. ಮೂಲಗಳ ಪ್ರಕಾರ ದೀಪಾವಳಿ ಹಬ್ಬಕ್ಕೂ ಮೊದಲೆ ಮಹಾರಾಷ್ಟ್ರ ಮತ್ತು ಹರಿಯಾಣ ರಾಜ್ಯಗಳಲ್ಲಿ ಚುನಾವಣೆ ನಡೆಯುವ ಸಾಧ್ಯತೆ ಇದೆ.
ಮೂರೂ ರಾಜ್ಯಗಳಲ್ಲಿ ಬಿಜೆಪಿ ಪಕ್ಷ ಅಧಿಕಾರ ನಡೆಸುತ್ತಿದ್ದು, ಜಾರ್ಖಂಡ್ನಲ್ಲಿ ಮಾತ್ರ ಪೂರ್ಣ ಬಹುಮತ ಹೊಂದಿದೆ. ಲೋಕಸಭಾ ಚುನಾವಣೆ ನಂತರ ನಡೆಯತ್ತಿರುವ ವಿಧಾನಸಭೆ ಚುನಾವಣೆಗಳ ಮೇಲೆ ದೇಶದ ಜನರ ದೃಷ್ಟಿ ನೆಟ್ಟಿದೆ.