ಕರ್ನಾಟಕ

karnataka

ETV Bharat / bharat

ನಟಿ ಕಂಗನಾ ಜೊತೆ ಸಂಜಯ್​ ರಾವತ್ ವಿವಾದ: ಮಹಾರಾಷ್ಟ್ರ ಗೃಹ ಸಚಿವರಿಗೆ ಮತ್ತೆ ಬೆದರಿಕೆ ಕರೆ - ಮಹಾರಾಷ್ಟ್ರ ಗೃಹ ಸಚಿವರಿಗೆ ಮತ್ತೆ ಬೆದರಿಕೆ

ನಟಿ ಕಂಗನಾ ಮತ್ತು ಸಂಜಯ್ ರಾವತ್ ನಡುವಿನ ವಿವಾದದ ಮಧ್ಯೆ ಮಹಾರಾಷ್ಟ್ರ ಗೃಹ ಸಚಿವ ಅನಿಲ್ ದೇಶ್​ಮುಖ್ ಅವರಿಗೆ ಮತ್ತೆ ಬೆದರಿಕೆ ಕರೆ ಬಂದಿವೆ.

Maharashtra Home Minister Anil Deshmukh again gets threat calls
ಮಹಾರಾಷ್ಟ್ರ ಗೃಹ ಸಚಿವರಿಗೆ ಬೆದರಿಕೆ

By

Published : Sep 9, 2020, 11:01 AM IST

Updated : Sep 9, 2020, 7:15 PM IST

ಮುಂಬೈ: ನಟಿ ಕಂಗನಾ ರನೌತ್​​ ಅವರ ವಿವಾದಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರ ಗೃಹ ಸಚಿವ ಅನಿಲ್ ದೇಶ್​ಮುಖ್ ಅವರ ನಿಲುವಿನ ಬಗ್ಗೆ ಮತ್ತೊಮ್ಮೆ ಬೆದರಿಕೆ ಕರೆಗಳು ಬಂದಿವೆ ಎಂದು ಅವರ ಆಪ್ತ ಮೂಲಗಳು ತಿಳಿಸಿವೆ.

ಮಂಗಳವಾರ ಮತ್ತು ಬುಧವಾರ ಬೆಳಗ್ಗೆ 6 ಗಂಟೆ ಸುಮಾರಿಗೆ ಹಿಮಾಚಲ ಪ್ರದೇಶದ ಬೇರೆ ಬೇರೆ ವ್ಯಕ್ತಿಗಳಿಂದ ದೇಶ್​ಮುಖ್ ಕರೆಗಳನ್ನು ಸ್ವೀಕರಿಸಿದ್ದು, ಈ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.

ಇದಕ್ಕೂ ಮುನ್ನ ಅನಾಮಧೇಯ ಕರೆ ಮಾಡಿದವನು ದೇಶ್​ಮುಖ್ ನಾಗ್ಪುರ ಕಚೇರಿಗೆ ಫೋನ್ ಮಾಡಿ, ತನಗೂ ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್​​ಗೂ ಬೆದರಿಕೆ ಹಾಕಿದ್ದಾನೆ ಎಂದು ಸಚಿವರು ಸೋಮವಾರ ತಿಳಿಸಿದ್ದರು. ರನೌತ್​​ಗೆ 'ವೈ-ಪ್ಲಸ್' ಭದ್ರತೆ ನೀಡುವ ಕೇಂದ್ರದ ನಿರ್ಧಾರದ ಬಗ್ಗೆ ದೇಶ್​ಮುಖ್ ಸೋಮವಾರ ಅಚ್ಚರಿ ವ್ಯಕ್ತಪಡಿಸಿದ್ದರು. ಕಂಗನಾ ತಮ್ಮ ಹೇಳಿಕೆಗಳಿಂದ ಮುಂಬೈ ಮತ್ತು ಮಹಾರಾಷ್ಟ್ರವನ್ನು 'ಅವಮಾನಿಸಿದ್ದಾರೆ' ಎಂದು ಹೇಳಿದ್ದರು.

ಮುಂಬೈಯನ್ನು ಪಾಕಿಸ್ತಾನ ಆಕ್ರಮಿತ ಕಾಶ್ಮೀರಕ್ಕೆ ಹೋಲಿಸಿದ ಹೇಳಿಕೆಗಳಿಂದ ಕಂಗನಾ ವಿರುದ್ಧ ಆಕ್ರೋಶ ವ್ಯಕ್ತವಾಗಿತ್ತು. ಶನಿವಾರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರ ಬಾಂದ್ರಾದಲ್ಲಿರುವ 'ಮಾತೋಶ್ರೀ' ನಿವಾಸಕ್ಕೆ ಕರೆಗಳು ಬಂದಿದ್ದು, ಕರೆ ಮಾಡಿದವರು ನಿವಾಸವನ್ನು ಸ್ಫೋಟಿಸುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ಮುಖ್ಯಮಂತ್ರಿ ಕಚೇರಿ ತಿಳಿಸಿದೆ. ಅಲ್ಲದೆ ಕರೆ ಮಾಡಿದ ವ್ಯಕ್ತಿ ಭೂಗತ ಪಾತಕಿ ದಾವೂದ್ ಇಬ್ರಾಹಿಂನ ಸಹಾಯಕ ಎಂದು ಹೇಳಿಕೊಂಡಿದ್ದಾನೆ ಎಂದು ಮಾಹಿತಿ ನೀಡಿದ್ದಾರೆ.

Last Updated : Sep 9, 2020, 7:15 PM IST

ABOUT THE AUTHOR

...view details