ಕರ್ನಾಟಕ

karnataka

ಭೀಕರ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ಐವರು ಸುಟ್ಟು ಕರಕಲಾದರು!

By

Published : Nov 23, 2019, 3:32 PM IST

Updated : Nov 23, 2019, 7:40 PM IST

ನಿಂತ ವಾಹನಕ್ಕೆ ಕಾರೊಂದು ಡಿಕ್ಕಿ ಹೊಡೆದಿದ್ದು, ಒಂದೇ ಕುಟುಂಬದ ಐವರು ಸುಟ್ಟು ಕರಕಲಾಗಿರುವ ಘಟನೆ ಉತ್ತರಪ್ರದೇಶದಲ್ಲಿ ನಡೆದಿದೆ.

ನಿಂತ ವಾಹನಕ್ಕೆ ಗುದ್ದಿದ ಕಾರು

ಏಟಾ:ನಿಂತ ವಾಹನಕ್ಕೆ ಕಾರೊಂದು ಗುದ್ದಿದ ಪರಿಣಾಮ ಒಂದೇ ಕುಟುಂಬದ ಐವರು ಸುಟ್ಟು ಕರಕಲಾಗಿರುವ ಘಟನೆ ಜಿಲ್ಲೆಯ ಬಾಗ್ವಾಲಾ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ನೋಯ್ಡಾದಿಂದ ಏಟಾ ಜಿಲ್ಲೆಯ ರಾಮಪುರ ಗ್ರಾಮಕ್ಕೆ ಕುಟುಂಬವೊಂದು ಕಾರಿನಲ್ಲಿ ಪ್ರಯಾಣಿಸುತ್ತಿತ್ತು. ಈ ವೇಳೆ ಬಾಗ್ವಾಲಾ ಬಳಿ ನಿಂತ ವಾಹನಕ್ಕೆ ಕಾರು ಗುದ್ದಿದ್ದು, ರಭಸಕ್ಕೆ ಕಾರಿಗೆ ಬೆಂಕಿ ಹೊತ್ತಿಕೊಂಡಿದೆ.

ಭೀಕರ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ಐವರು ಭಸ್ಮ

ಕಾರಿನಲ್ಲಿದ್ದ ಯುವತಿಯೊಬ್ಬಳು ಪ್ರಾಣಾಪಾಯದಿಂದ ಪಾರಾಗಿದ್ದು, ಸಂತೋಷ್​, ವಿಮಲಾ, ಬಬಲೂ, ಲವಕುಶ ಮತ್ತು ಪೂನಂ ಸೇರಿ ಐವರು ಸುಟ್ಟು ಕರಕಲಾಗಿದ್ದಾರೆ. ಸುದ್ದಿ ತಿಳಿದ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಯುವತಿಯನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಬಳಿಕ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಕಾರಿಗೆ ಬೆಂಕಿ ಹೊತ್ತಿಕೊಂಡಿರುವ ವಿಡಿಯೋ ವೈರಲ್​ ಆಗಿದೆ.

Last Updated : Nov 23, 2019, 7:40 PM IST

ABOUT THE AUTHOR

...view details