ಕೊಟ್ಟಾಯಂ :ಹೋಂ ಕ್ವಾರಂಟೈನ್ನಲ್ಲಿದ್ದ 41 ವರ್ಷದ ವ್ಯಕ್ತಿ ಮೃತಪಟ್ಟಿರುವ ಘಟನೆ ಕೇರಳದ ಕುಮಾರಕೋಮ್ನಲ್ಲಿ ನಡೆದಿದೆ.
ಕೇರಳದಲ್ಲಿ ಹೋಂ ಕ್ವಾರಂಟೈನ್ನಲ್ಲಿದ್ದ ವ್ಯಕ್ತಿ ಸಾವು.. ನಿಖರ ಕಾರಣ ಇನ್ನೂ ತಿಳಿದು ಬಂದಿಲ್ಲ.. - ಕ್ವಾರಂಟೈನ್ನಲ್ಲಿದ್ದ ವ್ಯಕ್ತಿ ಸಾವು
ಈತ ಕೊರೊನಾದಿಂದಾಗಿಯೇ ಸಾವನ್ನಪ್ಪಿರೋದಾ ಎಂಬುದರ ಬಗ್ಗೆ ಯಾವುದೇ ಸ್ಪಷ್ಟತೆ ಇಲ್ಲ. ಮರಣೋತ್ತರ ಪರೀಕ್ಷಾ ವರದಿ ಬಂದ ಬಳಿಕವಷ್ಟೇ ಸಾವಿಗೆ ನಿಖರ ಕಾರಣವೇನೆಂಬುದು ತಿಳಿದು ಬರಲಿದೆ.

ಕ್ವಾರಂಟೈನ್ನಲ್ಲಿದ್ದ ವ್ಯಕ್ತಿ ಸಾವು
ಮೃತ ವ್ಯಕ್ತಿಯು ರಾಷ್ಟ್ರೀಯ ಪರವಾನಗಿ ಹೊಂದಿದ್ದ ಲಾರಿಯ ಚಾಲಕನಾಗಿದ್ದ. ಮಾ.18 ರಂದು ಮುಂಬೈಗೆ ಭೇಟಿ ನೀಡಿ ಬಂದ ಬಳಿಕ ಕುಮಾರಕೋಮ್ನ ತಮ್ಮ ನಿವಾಸದಲ್ಲಿ ಹೋಂ ಕ್ವಾರಂಟೈನ್ನಲ್ಲಿದ್ದ. ಆದರೆ, ಇಂದು ಇದ್ದಕ್ಕಿದ್ದಂತೆ ಪ್ರಜ್ಞೆತಪ್ಪಿ ಕುಸಿದು ಬಿದ್ದು ಮನೆಯಲ್ಲೇ ಮೃತಪಟ್ಟಿದ್ದಾರೆ.
ಮರಣೋತ್ತರ ಪರೀಕ್ಷೆಗಾಗಿ ಶವವನ್ನು ರವಾನಿಸಲಾಗಿದೆ. ಈವರೆಗೂ ಕೇರಳದಲ್ಲಿ ಒಬ್ಬರು ಮಾತ್ರ ಮಹಾಮಾರಿಗೆ ಬಲಿಯಾಗಿದ್ದಾರೆ. 198 ಕೊರೊನಾ ಪ್ರಕರಣಗಳು ಈ ರಾಜ್ಯದಲ್ಲಿ ವರದಿಯಾಗಿವೆ.