ಉತ್ತರಕಾಶಿ: ಉತ್ತರಾಖಂಡದ ಉತ್ತರಕಾಶಿ ಜಿಲ್ಲೆಯ ಬರಾಹತ್ ಶ್ರೇಣಿಯ ಅರಣ್ಯದಲ್ಲಿ ಕಾಳ್ಗಿಚ್ಚು ಸಂಭವಿಸಿದ್ದು, ಬೆಂಕಿಯ ಕೆನ್ನಾಲಗೆಗೆ ಈಗಾಗಲೇ 9 ಹೆಕ್ಟೇರ್ ಅರಣ್ಯ ಪ್ರದೇಶ ಹಾನಿಯಾಗಿದೆ.
ಇಂಡೋ-ಟಿಬೆಟಿಯನ್ ಬಾರ್ಡರ್ ಪೊಲೀಸ್ (ಐಟಿಬಿಪಿ) ಸಿಬ್ಬಂದಿ ಬೆಂಕಿಯನ್ನು ನಂದಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ. ಸುಮಾರು 9 ಹೆಕ್ಟೇರ್ ಪ್ರದೇಶ ಬೆಂಕಿಗಾಹುತಿ ಆಗಿರುವುದಾಗಿ ವಿಭಾಗೀಯ ಅರಣ್ಯಾಧಿಕಾರಿ ಸಂದೀಪ್ ಕುಮಾರ್ ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಯನ್ನು ನಿರೀಕ್ಷಿಸಲಾಗಿದೆ.