ಚೆನ್ನೈ: ಚೆನ್ನೈನ ಕೊಯಂಬೇಡು ಬಸ್ ನಿಲ್ದಾಣದ ಬಳಿಯ ರತ್ನ ಸಿದ್ಧ ಆಸ್ಪತ್ರೆಯ ನಕಲಿ ವೈದ್ಯ ಕೆ.ತಿರುಥಾನಿಕಾಚಲಂ ಎಂಬುವವರು ಕೊರೊನಾ ಸೋಂಕಿಗೆ ಔಷಧ ಕಂಡು ಹಿಡದಿದ್ದೇನೆ ಎಂದು ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಹರಿ ಬಿಟ್ಟಿದ್ದಾರೆ.
ಆರೋಗ್ಯ ಮತ್ತು ಕುಟುಂಬ ಇಲಾಖೆ ನಿನ್ನೆ ಪತ್ರಿಕಾ ಪ್ರಕಟಣೆಯನ್ನು ಬಿಡುಗಡೆ ಮಾಡಿದ್ದು, ಇಂತಹ ನಕಲಿ ವೈದ್ಯರ ಹಾವಳಿಯಿಂದ ದೂರವಿರಲು ಸೂಚಿಸಲಾಗಿದೆ. ಅಲ್ಲದೇ ತಮಿಳುನಾಡು ಸರ್ಕಾರ ಇಂಥವರ ಮಾಹಿತಿ ಕಲೆಹಾಕುತ್ತಿದ್ದು, ಇದನ್ನು ಗಂಭೀರವಾಗಿ ಪರಿಗಣಿಸಿದೆ ಎಂದು ತಿಳಿಸಿದೆ.