ಮುಂಬೈ:ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಅವರ ಭೇಟಿಯ ಬಳಿಕ ಮಹಾರಾಷ್ಟ್ರ ಕಾಂಗ್ರೆಸ್ ಅಧ್ಯಕ್ಷ ಮಿಲಿಂದ್ ಡಿಯೋರಾ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.
ಅಂಚೆ ಮೂಲಕ ಹೈಕಮಾಂಡ್ಗೆ ರಾಜೀನಾಮೆ ಸಲ್ಲಿಸಿ ಬಳಿಕ ಮಾತನಾಡಿದ ಅವರು, 'ರಾಷ್ಟ್ರಮಟ್ಟದಲ್ಲಿ ಪಕ್ಷವನ್ನು ಬಲಪಡಿಸುವಂತಹ ಕೆಲಸ ಮಾಡಲು ನನ್ನ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದೇನೆ. ಇತ್ತೀಚೆಗೆ ಬಿಜೆಪಿ-ಶಿವಸೇನಾ ಮೈತ್ರಿಯನ್ನು ಹಿಂದಿಕ್ಕಿ ಪಕ್ಷವನ್ನು ಸಂಘಟಿಸುವುದು ತಮಗೆ ಸವಾಲಾಗಿದೆ ಎಂದಿದ್ದಾರೆ.
ಜೂನ್ 26ರಂದು ನವದೆಹಲಿಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯನ್ನು ಭೇಟಿಯಾದ ಬಳಿಕ ತಾವು ಹುದ್ದೆ ತ್ಯಜಿಸುವ ನಿರ್ಧಾರಕ್ಕೆ ಬಂದದ್ದಾಗಿ ಡಿಯೋರಾ ಹೇಳಿದ್ದಾರೆ.
ಅಖಿಲ ಭಾರತ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿಗಳಾದ ಮಲ್ಲಿಕರ್ಜುನ್ ಖರ್ಗೆ ಮತ್ತು ಕೆ.ಸಿ.ವೇಣುಗೋಪಾಲ್ ಅವರಿಗೆ ರಾಜೀನಾಮೆ ಬಗ್ಗೆ ತಿಳಿಸಿರುವುದಾಗಿ ಹೇಳಿಕೆಯಲ್ಲಿ ಸ್ಪಷ್ಟಪಡಿಸಿದ್ದಾರೆ.
ವರ್ಷಾಂತ್ಯದಲ್ಲಿ ಮಹಾರಾಷ್ಟ್ರ ವಿಧಾನಸಭೆಗೆ ಚುನಾವಣೆ ಎದುರಾಗಲಿದ್ದು, ಮುಂಬೈ ನಗರ ಘಟಕದ ಪಕ್ಷದ ಮೇಲ್ವಿಚಾರಣೆಗೆ ಮೂವರು ಹಿರಿಯ ಮುಖಂಡರು ಒಳಗೊಂಡ ತಾತ್ಕಾಲಿಕ ನಾಯಕತ್ವಕ್ಕೆ ಡಿಯೋರಾ ಹೈಕಮಾಂಡ್ಗೆ ಶಿಫಾರಸು ಮಾಡಿದ್ದರು.