ಕರ್ನಾಟಕ

karnataka

By

Published : Oct 8, 2020, 1:21 PM IST

ETV Bharat / bharat

'ಅಟಲ್​ ಟನಲ್' ಉದ್ಘಾಟನಾ ಸಮಾರಂಭದಲ್ಲಿ ಮೋದಿಯೊಂದಿಗೆ ಪಾಲ್ಗೊಂಡಿದ್ದ ಬಿಜೆಪಿ ಶಾಸಕನಿಗೆ ಕೊರೊನಾ

ಹಿಮಾಚಲ ಪ್ರದೇಶದ ರೋಹ್ಟಂಗ್​ನಲ್ಲಿ ಅಕ್ಟೋಬರ್ 3 ರಂದು ನಡೆದ 'ಅಟಲ್ ಟನಲ್' ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿದ್ದ ಬಿಜೆಪಿ ಶಾಸಕ ಸುರೇಂದ್ರ ಶೌರಿ ಅವರ ಕೋವಿಡ್​ ಪರೀಕ್ಷಾ ವರದಿ ಪಾಸಿಟಿವ್​ ಬಂದಿದೆ.

Atal tunnel
ಅಟಲ್​ ಟನಲ್

ಶಿಮ್ಲಾ: ವಿಶ್ವದ ಅತಿ ಉದ್ದದ ಹೆದ್ದಾರಿ ಸುರಂಗವಾದ 'ಅಟಲ್ ಟನಲ್' ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿದ್ದ ಬಿಜೆಪಿ ಶಾಸಕರೊಬ್ಬರಿಗೆ ಕೊರೊನಾ ಸೋಂಕು ತಗುಲಿರುವುದು ದೃಢವಾಗಿದೆ.

ಹಿಮಾಚಲ ಪ್ರದೇಶದ ರೋಹ್ಟಂಗ್​ನಲ್ಲಿ ಅಕ್ಟೋಬರ್ 3 ರಂದು ನಡೆದ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ರಾಜನಾಥ್ ಸಿಂಗ್, ಕೇಂದ್ರ ಹಣಕಾಸು ಖಾತೆ ರಾಜ್ಯ ಸಚಿವ ಅನುರಾಗ್ ಠಾಕೂರ್, ಹಿಮಾಚಲ ಪ್ರದೇಶ ಮುಖ್ಯಮಂತ್ರಿ ಜೈರಾಮ್ ಠಾಕೂರ್​, ಹಲವು ಶಾಸಕರು ಸೇರಿದಂತೆ ಇತರ ಗಣ್ಯರು ಪಾಲ್ಗೊಂಡಿದ್ದರು. ಇವರಲ್ಲಿ ಕುಲ್ಲು ಜಿಲ್ಲೆಯ ಬಂಜಾರ ಕ್ಷೇತ್ರದ ಶಾಸಕ ಸುರೇಂದ್ರ ಶೌರಿ ಅವರಿಗೆ ವೈರಸ್​ ತಗುಲಿದೆ.

ಸುರೇಂದ್ರ ಶೌರಿ ಅವರು ಅಕ್ಟೋಬರ್ 1 ರಂದು ಕೋವಿಡ್​ ಪರೀಕ್ಷೆಗೆ ಒಳಗಾಗಿದ್ದರು. ಅ.2 ರ ಸಂಜೆಯೇ ಇವರ ವರದಿ ಪಾಸಿಟಿವ್​ ಬಂದಿದೆ. ಆದರೂ ಕೂಡ ಅ.3 ರಂದು ಸುರಂಗಮಾರ್ಗದ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ವರದಿ ಬಂದಿರುವುದು ಸುರೇಂದ್ರ ಶೌರಿ ಅವರ ಗಮನಕ್ಕೆ ಬಂದಿಲ್ಲ ಎಂದು ಹೇಳಲಾಗಿದೆಯಾದರೂ ಪರೀಕ್ಷೆಗೆ ಒಳಪಟ್ಟ ಬಳಿಕ ಯಾವುದೇ ಮುನ್ನೆಚ್ಚರಿಕಾ ಕ್ರಮಗಳನ್ನು ಶಾಸಕ ತೆಗೆದುಕೊಳ್ಳದೇ, ಸೆಲ್ಫ್​ ಐಸೋಲೇಷನ್​ಗೆ ಒಳಗಾಗದೇ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದಾರೆ ಎನ್ನಲಾಗ್ತಿದೆ.

ಸಿಎಂ ಜೈರಾಮ್ ಠಾಕೂರ್ ಮತ್ತು ಸಂಪುಟ ಸಚಿವ ರಾಕೇಶ್ ಪಥಾನಿಯಾ ಅವರು ಸುರೇಂದ್ರ ಶೌರಿಯ ಪ್ರಾಥಮಿಕ ಸಂಪರ್ಕಕ್ಕೆ ಬಂದ ಗಣ್ಯರಾಗಿದ್ದಾರೆ ಎಂದು ಹೇಳಲಾಗುತ್ತಿದೆ.

ABOUT THE AUTHOR

...view details